ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮಿಷನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ ಎಂದರು.
ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂದು ಅವರು ನೇರವಾಗಿ ಹೇಳಿದ್ದಾರೆ. ತಮ್ಮ ಇಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಮಂತ್ರಿಗಳಿಗೆ ಗೊತ್ತಿದೆ. ಕೃಷ್ಣಭೈರೇಗೌಡರ ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳಿದ್ದಾರೆ. ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ ಎಂದು ಪ್ರಶ್ನೆ ಮಾಡಿದರು.
ಶಾಸಕ ಬಿ.ಆರ್.ಪಾಟೀಲ್ ಹೇಳಿರುವುದು ನಿಜ. ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದು ಹೇಳಿದ್ದಾರೆ. ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ. ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ. ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…