ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಒಳಮೀಸಲಾತಿ ಮಧ್ಯಂತರ ವರದಿಯನ್ನು ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರು 104 ಪುಟಗಳ ವರದಿ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.27) ವರದಿ ಸಲ್ಲಿಸಿದ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ತಿಂಗಳಿಗಿಂತ ಹೆಚ್ಚು ಕಾಲ ಒಳಮೀಸಲಾತಿ ಬಗ್ಗೆ ಆಳವಾದ ಅಧ್ಯಯನ ಮಾಡಿ 104 ಪುಟಗಳಲ್ಲಿ ವರದಿ ನೀಡಲಾಗಿದೆ. ಹಾಗಾಗಿ ಈ ವರದಿಯೂ ತರಾತುರಿಯಲ್ಲಿ ನೀಡಿರು ವರದಿಯಲ್ಲ. ಸರ್ಕಾರ ನಮಗೆ ವರದಿ ನೀಡಿಯೆಂದು ಕೇಳಿರಲಿಲ್ಲ, ಆದರೆ ನಾವೇ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದೇವೆ. ಹೀಗಾಗಿ ವರದಿಯನ್ನು ಪರಿಗಣಿಸಿ ಸರ್ಕಾರ ಏನು ನಿರ್ಧಾರ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.
ಸರ್ಕಾರಕ್ಕೆ ಒಳಮೀಸಲಾತಿಯ ಮಧ್ಯಂತರ ವರದಿ ನೀಡಿರುವುದು ವಿಳಂಬ ಧೋರಣೆ ಮಾಡುವುದಕ್ಕೆ ಅಲ್ಲ. ಬದಲಿಗೆ ಶಾಶ್ವತ ಪರಿಹಾರ ಕೊಡಬೇಕೆಂಬುದು ನಮ್ಮ ಇಚ್ಛೆಯಾಗಿದೆ. ಹೀಗಾಗಿ ಮಧ್ಯಂತರ ವರದಿ ಸಲ್ಲಿಕೆ ಮಾಡಿದ್ದೇನೆ ಎಂದು ತಿಳಿಸಿದರು.





