ರಾಜ್ಯ

ಸಿಎಂ ಸಿದ್ದರಾಮಯ್ಯರಿಗೆ ಒಳ ಮೀಸಲಾತಿ ಮಧ್ಯಂತರ ವರದಿ ಸಲ್ಲಿಸಿದ ಆಯೋಗ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಒಳಮೀಸಲಾತಿ ಮಧ್ಯಂತರ ವರದಿಯನ್ನು ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಎಚ್.ಎನ್‌. ನಾಗಮೋಹನದಾಸ್‌ ಅವರು 104 ಪುಟಗಳ ವರದಿ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.27) ವರದಿ ಸಲ್ಲಿಸಿದ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌ ಅವರು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ತಿಂಗಳಿಗಿಂತ ಹೆಚ್ಚು ಕಾಲ ಒಳಮೀಸಲಾತಿ ಬಗ್ಗೆ ಆಳವಾದ ಅಧ್ಯಯನ ಮಾಡಿ 104 ಪುಟಗಳಲ್ಲಿ ವರದಿ ನೀಡಲಾಗಿದೆ. ಹಾಗಾಗಿ ಈ ವರದಿಯೂ ತರಾತುರಿಯಲ್ಲಿ ನೀಡಿರು ವರದಿಯಲ್ಲ. ಸರ್ಕಾರ ನಮಗೆ ವರದಿ ನೀಡಿಯೆಂದು ಕೇಳಿರಲಿಲ್ಲ, ಆದರೆ ನಾವೇ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದೇವೆ. ಹೀಗಾಗಿ ವರದಿಯನ್ನು ಪರಿಗಣಿಸಿ ಸರ್ಕಾರ ಏನು ನಿರ್ಧಾರ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.

ಸರ್ಕಾರಕ್ಕೆ ಒಳಮೀಸಲಾತಿಯ ಮಧ್ಯಂತರ ವರದಿ ನೀಡಿರುವುದು ವಿಳಂಬ ಧೋರಣೆ ಮಾಡುವುದಕ್ಕೆ ಅಲ್ಲ. ಬದಲಿಗೆ ಶಾಶ್ವತ ಪರಿಹಾರ ಕೊಡಬೇಕೆಂಬುದು ನಮ್ಮ ಇಚ್ಛೆಯಾಗಿದೆ. ಹೀಗಾಗಿ ಮಧ್ಯಂತರ ವರದಿ ಸಲ್ಲಿಕೆ ಮಾಡಿದ್ದೇನೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

20 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

20 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

20 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago