ಬೆಂಗಳೂರು : ರೀಲ್ಸ್ ಮಾಡುವ KSRTC, BMTC ಸಾರಿಗೆ ಇಲಾಖೆಯ ಚಾಲಕ ನಿರ್ವಾಹಕರಿಗೆ ಸಾರಿಗೆ ಸಚಿವರು ಖಡಕ್ ಎಚ್ಚರಿಕೆ ಕೊಟ್ಟಿದ್ದರು. ಈ ಬೆನ್ನಲ್ಲೆ ಇದೀಗ ಸಮವಸ್ತ್ರ ಧರಿಸಿ ರೀಲ್ಸ್ ಮಾಡುವ ಪೊಲೀಸರಿಗೆ ಕಮಿಷನರ್ ಬಿ ದಯಾನಂದ್ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೆ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಶಿಸ್ತು ಕ್ರಮ ಎಚ್ಚರಿಕೆ ಸಹ ನೀಡಿದ್ದಾರೆ.
ಸಮವಸ್ತ್ರದಲ್ಲಿ ಅಶಿಸ್ತು ತೋರಿಸುವ ಸಿಬ್ಬಂದಿ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಫೋಟೋ, ರೀಲ್ಸ್ ಅಪ್ಲೋಡ್ ಮಾಡುವಂತಿಲ್ಲ. ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆಗೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪೊಲೀಸ್ ಸಮವಸ್ತ್ರವು ಪೊಲೀಸರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಡಿಜಿಟಲ್ ಪ್ಲಾಟ್ ಫಾರ್ಮ್ ನಲ್ಲಿ ಇದರ ಬಳಕೆಯು ಈ ಮೌಲ್ಯಗಳನ್ನ ಪ್ರತಿಬಿಂಬಿಸುವಂತಿರಬೇಕಾಗುತ್ತದೆ. ಹಾಗಾಗಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವವರಿಗೆ ಶಿಸ್ತು ಕ್ರಮದ ಎಚ್ಚರಿಕೆಗೆ ನೀಡಿ ಕಮಿಷನರ್ ದಯಾನಂದ್ ಸೂಚನೆ ನೀಡಿದ್ದಾರೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…