ಬೆಂಗಳೂರು : ರೀಲ್ಸ್ ಮಾಡುವ KSRTC, BMTC ಸಾರಿಗೆ ಇಲಾಖೆಯ ಚಾಲಕ ನಿರ್ವಾಹಕರಿಗೆ ಸಾರಿಗೆ ಸಚಿವರು ಖಡಕ್ ಎಚ್ಚರಿಕೆ ಕೊಟ್ಟಿದ್ದರು. ಈ ಬೆನ್ನಲ್ಲೆ ಇದೀಗ ಸಮವಸ್ತ್ರ ಧರಿಸಿ ರೀಲ್ಸ್ ಮಾಡುವ ಪೊಲೀಸರಿಗೆ ಕಮಿಷನರ್ ಬಿ ದಯಾನಂದ್ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೆ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಶಿಸ್ತು ಕ್ರಮ ಎಚ್ಚರಿಕೆ ಸಹ ನೀಡಿದ್ದಾರೆ.
ಸಮವಸ್ತ್ರದಲ್ಲಿ ಅಶಿಸ್ತು ತೋರಿಸುವ ಸಿಬ್ಬಂದಿ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಫೋಟೋ, ರೀಲ್ಸ್ ಅಪ್ಲೋಡ್ ಮಾಡುವಂತಿಲ್ಲ. ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆಗೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪೊಲೀಸ್ ಸಮವಸ್ತ್ರವು ಪೊಲೀಸರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಡಿಜಿಟಲ್ ಪ್ಲಾಟ್ ಫಾರ್ಮ್ ನಲ್ಲಿ ಇದರ ಬಳಕೆಯು ಈ ಮೌಲ್ಯಗಳನ್ನ ಪ್ರತಿಬಿಂಬಿಸುವಂತಿರಬೇಕಾಗುತ್ತದೆ. ಹಾಗಾಗಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವವರಿಗೆ ಶಿಸ್ತು ಕ್ರಮದ ಎಚ್ಚರಿಕೆಗೆ ನೀಡಿ ಕಮಿಷನರ್ ದಯಾನಂದ್ ಸೂಚನೆ ನೀಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…