DCM DK Shivakumar
ಬೆಂಗಳೂರು : ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ನಡೆದ `ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಪ್ರತಿಭಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
ಇದೊಂದು ಐತಿಹಾಸಿಕ ಹೋರಾಟ. ಮಲ್ಲಿಕಾರ್ಜುನ ಖರ್ಗೆ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಈಗ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವ ಎತ್ತರಕ್ಕೆ ಬೆಳೆದಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು, ರಕ್ಷಣೆಗೆ ದೊಡ್ಡ ಸಂದೇಶ ರವಾನಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಪರವಾಗಿ ದಿಟ್ಟ ಹೋರಾಟ ಆರಂಭಿಸಿದ್ದಾರೆ. ದೇಶಾದ್ಯಂತ ಮತ ಅಕ್ರಮ ಬಯಲಿಗೆಳೆಯಲು ಕರ್ನಾಟಕದಲ್ಲಿ ಮುನ್ನುಡಿ ಬರೆಯುತ್ತಿದ್ದಾರೆ” ಎಂದರು.
`ಇತ್ತೀಚೆಗೆ ದೆಹಲಿಯಲ್ಲಿ ನಡೆದ ಎಐಸಿಸಿ ಮಾನವ ಹಕ್ಕು ವಿಭಾಗದ ಸಭೆಯಲ್ಲಿ ರಾಹುಲ್ ಗಾಂಧಿ ಅವರು, ಸಂವಿಧಾನ ಉಳಿಸಿ ಪ್ರಜಾಪ್ರಭುತ್ವ ರಕ್ಷಣೆ ಮಾಡಲು, ಆಸ್ಪತ್ರೆಗಳಲ್ಲಿ ಬ್ಲಡ್ ಬ್ಯಾಂಕ್ ಇರುವಂತೆ ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಅವರ ಸೂಚನೆಗೆ ನಾವೆಲ್ಲರೂ ಬದ್ಧರಾಗಿದ್ದೇವೆ” ಎಂದು ಹೇಳಿದರು.
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…