ರಾಜ್ಯ

ರಾಜ್ಯಗಳ ಒಕ್ಕೂಟ ರಕ್ಷಣೆಗೆ ಬದ್ಧ: ಸ್ಟಾಲಿನ್‌ಗೆ ಪತ್ರ ಬರೆದ ಸಿಎಂ

ಬೆಂಗಳೂರು: ಸಂವಿಧಾನ ಬದ್ದವಾದ ಒಕ್ಕೂಟ ತತ್ವಗಳು ಹಾಗೂ ದಕ್ಷಿಣ ರಾಜ್ಯಗಳ ಅಧಿಕಾರ ರಕ್ಷಿಸಲು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರ ಮರುವಿಂಗಡಣೆ ಎಂಬ ತತ್ವ ವಿರೋಧಿಸಿ ಎಂಕೆ ಸ್ಟಾಲಿನ್‌ ಮಾ.22ರಂದು ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಏರ್ಪಾಡು ಮಾಡಿದ್ದಾರೆ.

ಇದಕ್ಕೆ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ ಅವರಿಗೆ ಪತ್ರ ಬರೆದಿದ್ದು, ರಾಜ್ಯಗಳ ಸ್ವಾಯತ್ತತೆ ಹಾಗೂ ಕ್ಷೇತ್ರ ಮರುವಿಂಗಡನೆ ಬಗ್ಗೆ ಮಹತ್ವದ ವಿಷಯಗಳನ್ನು ಎತ್ತಿದ ನಿಮ್ಮ ಪತ್ರ ನನಗೆ ತಲುಪಿದೆ. ಪೂರ್ವ ನಿಗದಿ ಕಾರ್ಯಕ್ರಮಗಳು ಇರುವ ಕಾರಣ ಮಾರ್ಚ್‌ 22ರ ಸಭೆಗೆ ಹಾಜರಾಗಲು ಸಾದ್ಯವಾಗುತ್ತಿಲ್ಲ.

ಆ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು ʼಎಕ್ಸ್‌ʼ ನಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ನಡೆಸಲು ಹೊರಟಿರುವ, ಜನಸಂಖ್ಯಾ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆ ಸಂಬಂಧ ತಮಿಳುನಾಡು ಜೊತೆಗೆ ಕೈ ಜೋಡಿಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಕರ್ನಾಟಕ, ಕೇರಳ, ತೆಲಂಗಾಣ, ಪಶ್ಚಿಮ ಬಂಗಾಳ, ಪಂಜಾಬ್‌, ಒಡಿಶಾ ಹಾಗೂ ಇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.

ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆಯು ಅನ್ಯಾಯದ ಕಸರತ್ತು. ಇದರ ವಿರುದ್ಧ ನಿರಂತರ ಹೋರಾಟದ ಅಗತ್ಯವಿದೆ. ಇದಕ್ಕಾಗಿ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) ಭಾಗವಾಗಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

7 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

7 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

7 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

8 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

9 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

9 hours ago