ರಾಜ್ಯ

ರಾಜ್ಯಗಳ ಒಕ್ಕೂಟ ರಕ್ಷಣೆಗೆ ಬದ್ಧ: ಸ್ಟಾಲಿನ್‌ಗೆ ಪತ್ರ ಬರೆದ ಸಿಎಂ

ಬೆಂಗಳೂರು: ಸಂವಿಧಾನ ಬದ್ದವಾದ ಒಕ್ಕೂಟ ತತ್ವಗಳು ಹಾಗೂ ದಕ್ಷಿಣ ರಾಜ್ಯಗಳ ಅಧಿಕಾರ ರಕ್ಷಿಸಲು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರ ಮರುವಿಂಗಡಣೆ ಎಂಬ ತತ್ವ ವಿರೋಧಿಸಿ ಎಂಕೆ ಸ್ಟಾಲಿನ್‌ ಮಾ.22ರಂದು ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಏರ್ಪಾಡು ಮಾಡಿದ್ದಾರೆ.

ಇದಕ್ಕೆ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ ಅವರಿಗೆ ಪತ್ರ ಬರೆದಿದ್ದು, ರಾಜ್ಯಗಳ ಸ್ವಾಯತ್ತತೆ ಹಾಗೂ ಕ್ಷೇತ್ರ ಮರುವಿಂಗಡನೆ ಬಗ್ಗೆ ಮಹತ್ವದ ವಿಷಯಗಳನ್ನು ಎತ್ತಿದ ನಿಮ್ಮ ಪತ್ರ ನನಗೆ ತಲುಪಿದೆ. ಪೂರ್ವ ನಿಗದಿ ಕಾರ್ಯಕ್ರಮಗಳು ಇರುವ ಕಾರಣ ಮಾರ್ಚ್‌ 22ರ ಸಭೆಗೆ ಹಾಜರಾಗಲು ಸಾದ್ಯವಾಗುತ್ತಿಲ್ಲ.

ಆ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು ʼಎಕ್ಸ್‌ʼ ನಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ನಡೆಸಲು ಹೊರಟಿರುವ, ಜನಸಂಖ್ಯಾ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆ ಸಂಬಂಧ ತಮಿಳುನಾಡು ಜೊತೆಗೆ ಕೈ ಜೋಡಿಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಕರ್ನಾಟಕ, ಕೇರಳ, ತೆಲಂಗಾಣ, ಪಶ್ಚಿಮ ಬಂಗಾಳ, ಪಂಜಾಬ್‌, ಒಡಿಶಾ ಹಾಗೂ ಇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.

ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆಯು ಅನ್ಯಾಯದ ಕಸರತ್ತು. ಇದರ ವಿರುದ್ಧ ನಿರಂತರ ಹೋರಾಟದ ಅಗತ್ಯವಿದೆ. ಇದಕ್ಕಾಗಿ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) ಭಾಗವಾಗಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದರು.

ಆಂದೋಲನ ಡೆಸ್ಕ್

Recent Posts

ಗೋವಾ ಅವಘಡ : ಭಾರತದಿಂದ ಪರಾರಿಯಾದ ಲುತ್ರಾ ಸೋದರರು ಥಾಯ್ಲೆಂಡ್‌ನಲ್ಲಿ ವಶಕ್ಕೆ

ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…

31 mins ago

ಡೀಮ್ಡ್‌ ಅರಣ್ಯ ಪ್ರದೇಶ ಗುರುತಿಸುವಿಕೆಗೆ ಸಮಿತಿ ರಚನೆ : ಈಶ್ವರ ಖಂಡ್ರೆ

ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…

1 hour ago

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…

1 hour ago

ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…

1 hour ago

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

1 hour ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…

1 hour ago