ರಾಜ್ಯ

ರಾಜಕೀಯ ಪಕ್ಷಗಳ ಸಂವಹನಕ್ಕೆ ಆಹ್ವಾನ ನೀಡಿದ ಚುನಾವಣಾ ಆಯೋಗ

ಚುನಾವಣಾ ಆಯೋಗದಿಂದ ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಹಿರಿಯ ನಾಯಕರೊಂದಿಗೆ ಸಂವಾದಕ್ಕೆ ಆಹ್ವಾನ

ಬೆಂಗಳೂರು: ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನಿನ ಚೌಕಟ್ಟಿನೊಳಗೆ ಸಂವಹನ ನಡೆಸುವ ಉದ್ದೇಶದೊಂದಿಗೆ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ನಾಯಕರೊಂದಿಗೆ ಸಭೆಗಳನ್ನು ಹಮ್ಮಿಕೊಳ್ಳಲು ಎಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.

ಚುನಾವಣೆಗಳಿಗೆ ಸಂಬಂಧಿಸಿದಂತೆ ತಾಲೂಕು ಮಟ್ಟದಲ್ಲಿ ಚುನಾವಣಾ ನೊಂದಣಾಧಿಕಾರಿಗಳು (ERO), ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು (DEO) ಅಥವಾ ರಾಜ್ಯ ಮಟ್ಟದಲ್ಲಿ ಮುಖ್ಯ ಚುನಾವಣಾಧಿಕಾರಿಗಳು (CEO) ಬಗೆಹರಿಸಲಾಗದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಸಲಹೆಗಳನ್ನು ಕ್ರೂಢೀಕರಿಸಿ 2025 ರ ಏಪ್ರಿಲ್ 30 ರೊಳಗೆ ಭಾರತದ ಚುನಾವಣಾ ಆಯೋಗಕ್ಕೆ ಸಲ್ಲಿಸಲು ಸೂಚಿಸಲಾಗಿದೆ.

ಈ ಕುರಿತು ಆಯೋಗದಿಂದ ಇಂದು ರಾಜಕೀಯ ಪಕ್ಷಗಳಿಗೆ ಕಳುಹಿಸಲಾಗಿರುವ ವೈಯಕ್ತಿಕ ಪತ್ರದಲ್ಲಿ, ಆಯೋಗವು ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಪಕ್ಷದ ಹಿರಿಯ ಸದಸ್ಯರೊಂದಿಗೆ ಪರಸ್ಪರ ಅನುಕೂಲಕರ ಸಮಯದಲ್ಲಿ, ಸ್ಥಾಪಿತ ಕಾನೂನಿಗೆ ಅನುಗುಣವಾಗಿ ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಸಂವಾದವನ್ನು ರೂಪಿಸಲು ವೇದಿಕೆಯನ್ನು ಸೃಜಿಸಲಾಗಿದೆ.

ಇದಕ್ಕೂ ಮೊದಲು, ಕಳೆದ ವಾರ ನಡೆದ ಭಾರತ ಚುನಾವಣಾ ಆಯೋಗದ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ ಸಮ್ಮೇಳನದಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಚುನಾವಣಾ ನೋಂದಣಾದಿಕಾರಿಗಳು, ರಾಜಕೀಯ ಪಕ್ಷಗಳೊಂದಿಗೆ ನಿಯಮಿತವಾಗಿ ಸಂವಹನ ನಡೆಸಲು ಸೂಚನೆ ನೀಡಿದ್ದರು. ಇಂತಹ ಸಭೆಗಳಲ್ಲಿ ಪಡೆದ ಯಾವುದೇ ಸಲಹೆಗಳನ್ನು ಈಗಾಗಲೇ ಕಾನೂನು ಚೌಕಟ್ಟಿನೊಳಗೆ ಕಟ್ಟುನಿಟ್ಟಾಗಿ ಪರಿಹರಿಸಿ, 2025ನೇ ಮಾರ್ಚ್ 31, ರೊಳಗೆ ತೆಗೆದುಕೊಂಡ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ತಿಳಿಸಲಾಗಿತ್ತು. ಅಲ್ಲದೆ, ಚುನಾವಣಾ ಆಯೋಗದ ಈ ವಿನೂತನ ಕಾರ್ಯಕ್ಕೆ ರಾಜಕೀಯ ಪಕ್ಷಗಳೂ ಸಹ ಕೈಜೋಡಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಲು ಒತ್ತಾಯಿಸಲಾಗಿತ್ತು.

ಭಾರತ ಚುನಾವಣಾ ಆಯೋಗವು, ಸಂವಿಧಾನ ಮತ್ತು ಶಾಸನಬದ್ಧ ಚೌಕಟ್ಟಿನ ಪ್ರಕಾರ, ಚುನಾವಣಾ ಪ್ರಕ್ರಿಯೆಗಳ ಎಲ್ಲಾ ಅಂಶಗಳನ್ನು ಒಳಗೊಂಡು ಗುರುತಿಸಿರುವ 28 ಪಾಲುದಾರರಲ್ಲಿ ರಾಜಕೀಯ ಪಕ್ಷಗಳು ಪ್ರಮುಖ ಪಾಲುದಾರರಲ್ಲಿ ಒಂದಾಗಿದೆ. ರಾಜಕೀಯ ಪಕ್ಷಗಳಿಗೆ ಬರೆದ ಪತ್ರದಲ್ಲಿ ಆಯೋಗವು ಜನರ ಪ್ರಾತಿನಿಧ್ಯ ಕಾಯ್ದೆ 1950 ಮತ್ತು 1951; ಮತದಾರರ ನಿಯಮಗಳ ನೋಂದಣಿ, 1960; ಚುನಾವಣಾ ನಿಯಮಗಳ ನಡವಳಿಕೆ, 1961; ಮಾನ್ಯ ಸುಪ್ರೀಂ ಕೋರ್ಟ್ ಮತ್ತು ಭಾರತದ ಚುನಾವಣಾ ಆಯೋಗವು ನೀಡಿದ ಸೂಚನೆಗಳು, ಕೈಪಿಡಿಗಳು ಮತ್ತು ಕೈಪಿಡಿಗಳ ಆದೇಶಗಳು ಭಾರತ ಚುನಾವಣಾ ಆಯೋಗದ ವೆಬ್ ಸೈಟ್‍ನಲ್ಲಿ ಕಾಲಕಾಲಕ್ಕೆ ಲಭ್ಯವಿದೆ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸಲು ವಿಕೇಂದ್ರೀಕೃತ, ಮತ್ತು ಪಾರದರ್ಶಕ ಕಾನೂನು ಚೌಕಟ್ಟನ್ನು ಆಯೋಗವು ಸ್ಥಾಪಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

17 mins ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

28 mins ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

2 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

2 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

3 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

3 hours ago