ರಾಜ್ಯ

ರಾಜಕೀಯ ಪಕ್ಷಗಳ ಸಂವಹನಕ್ಕೆ ಆಹ್ವಾನ ನೀಡಿದ ಚುನಾವಣಾ ಆಯೋಗ

ಚುನಾವಣಾ ಆಯೋಗದಿಂದ ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಹಿರಿಯ ನಾಯಕರೊಂದಿಗೆ ಸಂವಾದಕ್ಕೆ ಆಹ್ವಾನ

ಬೆಂಗಳೂರು: ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನಿನ ಚೌಕಟ್ಟಿನೊಳಗೆ ಸಂವಹನ ನಡೆಸುವ ಉದ್ದೇಶದೊಂದಿಗೆ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ನಾಯಕರೊಂದಿಗೆ ಸಭೆಗಳನ್ನು ಹಮ್ಮಿಕೊಳ್ಳಲು ಎಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.

ಚುನಾವಣೆಗಳಿಗೆ ಸಂಬಂಧಿಸಿದಂತೆ ತಾಲೂಕು ಮಟ್ಟದಲ್ಲಿ ಚುನಾವಣಾ ನೊಂದಣಾಧಿಕಾರಿಗಳು (ERO), ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು (DEO) ಅಥವಾ ರಾಜ್ಯ ಮಟ್ಟದಲ್ಲಿ ಮುಖ್ಯ ಚುನಾವಣಾಧಿಕಾರಿಗಳು (CEO) ಬಗೆಹರಿಸಲಾಗದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಸಲಹೆಗಳನ್ನು ಕ್ರೂಢೀಕರಿಸಿ 2025 ರ ಏಪ್ರಿಲ್ 30 ರೊಳಗೆ ಭಾರತದ ಚುನಾವಣಾ ಆಯೋಗಕ್ಕೆ ಸಲ್ಲಿಸಲು ಸೂಚಿಸಲಾಗಿದೆ.

ಈ ಕುರಿತು ಆಯೋಗದಿಂದ ಇಂದು ರಾಜಕೀಯ ಪಕ್ಷಗಳಿಗೆ ಕಳುಹಿಸಲಾಗಿರುವ ವೈಯಕ್ತಿಕ ಪತ್ರದಲ್ಲಿ, ಆಯೋಗವು ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಪಕ್ಷದ ಹಿರಿಯ ಸದಸ್ಯರೊಂದಿಗೆ ಪರಸ್ಪರ ಅನುಕೂಲಕರ ಸಮಯದಲ್ಲಿ, ಸ್ಥಾಪಿತ ಕಾನೂನಿಗೆ ಅನುಗುಣವಾಗಿ ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಸಂವಾದವನ್ನು ರೂಪಿಸಲು ವೇದಿಕೆಯನ್ನು ಸೃಜಿಸಲಾಗಿದೆ.

ಇದಕ್ಕೂ ಮೊದಲು, ಕಳೆದ ವಾರ ನಡೆದ ಭಾರತ ಚುನಾವಣಾ ಆಯೋಗದ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ ಸಮ್ಮೇಳನದಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಚುನಾವಣಾ ನೋಂದಣಾದಿಕಾರಿಗಳು, ರಾಜಕೀಯ ಪಕ್ಷಗಳೊಂದಿಗೆ ನಿಯಮಿತವಾಗಿ ಸಂವಹನ ನಡೆಸಲು ಸೂಚನೆ ನೀಡಿದ್ದರು. ಇಂತಹ ಸಭೆಗಳಲ್ಲಿ ಪಡೆದ ಯಾವುದೇ ಸಲಹೆಗಳನ್ನು ಈಗಾಗಲೇ ಕಾನೂನು ಚೌಕಟ್ಟಿನೊಳಗೆ ಕಟ್ಟುನಿಟ್ಟಾಗಿ ಪರಿಹರಿಸಿ, 2025ನೇ ಮಾರ್ಚ್ 31, ರೊಳಗೆ ತೆಗೆದುಕೊಂಡ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ತಿಳಿಸಲಾಗಿತ್ತು. ಅಲ್ಲದೆ, ಚುನಾವಣಾ ಆಯೋಗದ ಈ ವಿನೂತನ ಕಾರ್ಯಕ್ಕೆ ರಾಜಕೀಯ ಪಕ್ಷಗಳೂ ಸಹ ಕೈಜೋಡಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಲು ಒತ್ತಾಯಿಸಲಾಗಿತ್ತು.

ಭಾರತ ಚುನಾವಣಾ ಆಯೋಗವು, ಸಂವಿಧಾನ ಮತ್ತು ಶಾಸನಬದ್ಧ ಚೌಕಟ್ಟಿನ ಪ್ರಕಾರ, ಚುನಾವಣಾ ಪ್ರಕ್ರಿಯೆಗಳ ಎಲ್ಲಾ ಅಂಶಗಳನ್ನು ಒಳಗೊಂಡು ಗುರುತಿಸಿರುವ 28 ಪಾಲುದಾರರಲ್ಲಿ ರಾಜಕೀಯ ಪಕ್ಷಗಳು ಪ್ರಮುಖ ಪಾಲುದಾರರಲ್ಲಿ ಒಂದಾಗಿದೆ. ರಾಜಕೀಯ ಪಕ್ಷಗಳಿಗೆ ಬರೆದ ಪತ್ರದಲ್ಲಿ ಆಯೋಗವು ಜನರ ಪ್ರಾತಿನಿಧ್ಯ ಕಾಯ್ದೆ 1950 ಮತ್ತು 1951; ಮತದಾರರ ನಿಯಮಗಳ ನೋಂದಣಿ, 1960; ಚುನಾವಣಾ ನಿಯಮಗಳ ನಡವಳಿಕೆ, 1961; ಮಾನ್ಯ ಸುಪ್ರೀಂ ಕೋರ್ಟ್ ಮತ್ತು ಭಾರತದ ಚುನಾವಣಾ ಆಯೋಗವು ನೀಡಿದ ಸೂಚನೆಗಳು, ಕೈಪಿಡಿಗಳು ಮತ್ತು ಕೈಪಿಡಿಗಳ ಆದೇಶಗಳು ಭಾರತ ಚುನಾವಣಾ ಆಯೋಗದ ವೆಬ್ ಸೈಟ್‍ನಲ್ಲಿ ಕಾಲಕಾಲಕ್ಕೆ ಲಭ್ಯವಿದೆ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸಲು ವಿಕೇಂದ್ರೀಕೃತ, ಮತ್ತು ಪಾರದರ್ಶಕ ಕಾನೂನು ಚೌಕಟ್ಟನ್ನು ಆಯೋಗವು ಸ್ಥಾಪಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago