ರಾಜ್ಯ

ಸಮುದಾಯದ ಸಂಘಟನೆ ಅಗತ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದುಳಿದವರು ಸಂಘಟಿಸಿದರೆ ಜಾತೀಯತೆಯಾಗುವುದಿಲ್ಲ. ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ ಎಂದು ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಭಾನುವಾರ ದೇವಾಂಗ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ದೇವಾಂಗ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇವಾಂಗ ಸಮುದಾಯದವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘವು ನೂರು ವರ್ಷಗಳನ್ನು ಪೂರೈಸುವುದು ಮೈಲಿಗಲ್ಲು ಸಾಧನೆಯಾಗಿದೆ. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ನಿಲಯ, ವ್ಯವಸ್ಥೆ ಒದಗಿಸಲಾಗುತ್ತಿರುವುದು ಸಂತಸದ ವಿಚಾರ ಎಂದರು.

ಮಹಿಳಾ ವಸತಿನಿಲಯ ನಿರ್ಮಾಣಕ್ಕೆ ಸರ್ಕಾರದ ನೆರವಿಗೆ ಭರವಸೆ
ಮಹಿಳೆಯರು ಹಾಗೂ ಶೋಷಿತರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಪ್ರಸ್ತುತ ಲಿಂಗ ತಾರತಮ್ಯ ನೀಗುತ್ತಿದ್ದು, ಸಂಘದವರು ಮಹಿಳಾ ಸಬಲೀಕರಣಕ್ಕೆ ನೆರವು ನೀಡುತ್ತಿದೆ. ಮಹಿಳಾ ವಸತಿನಿಲಯ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯ ನೀಡುವ ಭರವಸೆ ನೀಡಿದರು.

ಸಮುದಾಯದ ಸಂಘಟನೆ ಅಗತ್ಯ
ಎಲ್ಲರನ್ನೊಳಗೊಂಡ ಅಭಿವೃದ್ಧಿಯನ್ನು ಸಾಧಿಸುವುದು ನಮ್ಮ ಸರ್ಕಾರದ ಧ್ಯೇಯ. ಶ್ರೀಮಂತ ಇತಿಹಾಸವಿರುವ ಈ ಸಮುದಾಯದವರು ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದಿದೆ. ರೈತರು ಆಹಾರ ಪೂರೈಸಿದಂತೆ, ನೇಕಾರರು ಬಟ್ಟೆಯನ್ನು ತಯಾರಿಸುತ್ತಾರೆ. ಈ ಸಮುದಾಯದ ಸಂಘಟನೆಯಾಗುವುದು ಅಗತ್ಯ. ಸಂಘಟನೆಯ ಮೂಲಕವೇ ಶಕ್ತಿ ಬೆಳೆಯುತ್ತದೆ. ಹಿಂದುಳಿದವರು ಸಂಘಟಿಸಿದರೆ ಜಾತಿಯತೆಯಾಗುವುದಿಲ್ಲ ಎಂದು ಸಮಾಜ ಚಿಂತಕರು ಲೋಹಿಯಾ ಅವರು ಹೇಳಿದ್ದಾರೆ. ಶಿಕ್ಷಣದಿಂದ ವಂಚಿತರಾಗಿರುವುದರಿಂದ ಸಮಾಜದಲ್ಲಿ ಅಸಮಾನತೆಯಿದೆ. ಬಸವಾದಿ ಶರಣರು ಸಮಾಜದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ್ದರು.ಡಾ.ಬಿ.ಆರ್.ಅಂಬೇಡ್ಕರ್ ಅವರು, ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ,ರಾಜಕೀಯ ಸ್ವಾತಂತ್ರ್ಯದಿಂದ ಮಾತ್ರ ಸಮಸಮಾಜ ನಿರ್ಮಾಣವಾಗುತ್ತದೆ ಎಂದು ನುಡಿದಿದ್ದರು.

ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ- ಸಮುದಾಯಕ್ಕೆ ಸಿಎಂ ಕರೆ
ದೇವಾಂಗ ಸಮುದಾಯದಲ್ಲಿರುವ ಎಲ್ಲ ಉಪಜಾತಿಗಳನ್ನು ತೆಗೆಯಬೇಕು. ಸಮುದಾಯದಲ್ಲಿ ಹಲವು ಗುಂಪುಗಳಿದ್ದರೂ, ಒಂದೇ ಶಕ್ತಿಯಾಗಿ ಸಂಘಟಿತರಾಗಿ , ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು. ಸಮಾಜದಲ್ಲಿ ಸಾಕ್ಷರತೆ ಶೇ.76 ರಷ್ಟಿದ್ದು, ಮಹಿಳೆಯರಲ್ಲಿ ಈ ಪ್ರಮಾಣ ಗಣನೀಯವಾಗಿ ಕಡಿಮೆಯಿದೆ. ಸಮುದಾಯದ ಪ್ರತಿಯೊಬ್ಬರೂ ಶಿಕ್ಷಿತರಾಗಬೇಕು. ಜಾತಿವ್ಯವಸ್ಥೆಯಿಲ್ಲದ ಸಮಾಜವನ್ನು ನಿರ್ಮಿಸುವುದೇ ಸಂವಿಧಾನದ ಆಶಯವಾಗಿದೆ. ಎಲ್ಲ ಜಾತಿಧರ್ಮದವರು ಸಹಿಷ್ಣುತೆ ಮತ್ತು ಸಹಬಾಳ್ವೆಯನ್ನು ರೂಢಿಸಿಕೊಳ್ಳಬೇಕು. ಶಿಕ್ಷಣ ಸಂಘಟನೆ ಮತ್ತು ಹೋರಾಟದ ಮೂಲಕ ನಿಮ್ಮ ಹಕ್ಕುಗಳನ್ನು ಪಡೆಯಿರಿ ಎಂದು ತಿಳಿಸಿದರು.

ನೇಕಾರರ ಅಭಿವೃದ್ಧಿ ನಿಗಮ- ಪರಿಶೀಲಿಸಿ ತೀರ್ಮಾನ
2004-05 ರಲ್ಲಿ ಹಣಕಾಸು ಸಚಿವನಾಗಿದ್ದ ಸಂದರ್ಭದಲ್ಲಿ ನೇಕಾರರಿಗೆ ತಲಾ ಯೂನಿಟ್ ಗೆ 4.20 ರೂ. ಇದ್ದ ವಿದ್ಯುತ್ ದರವನ್ನು 1.20 ರೂ.ಗಳಿಗೆ ಕಡಿತಗೊಳಿಸಲಾಗಿತ್ತು. ಈ ಯೋಜನೆಯ ಲಾಭವನ್ನು ಸಮುದಾಯದ ಶೇ.80 ರಷ್ಟು ಜನರಿಗೆ ನೆರವಾಗಿತ್ತು. ಪ್ರಸ್ತುತ ನೇಕಾರರಿಗೆ 20 ಹೆಚ್ ಪಿವರೆಗೆ ರಿಯಾಯತಿ ದರದಲ್ಲಿ ವಿದ್ಯುತ್ ವ್ಯವಸ್ಥೆ ನೀಡಲಾಗುತ್ತಿದೆ. ಶೂನ್ಯಬಡ್ಡಿ ದರದಲ್ಲಿ 5 ಲಕ್ಷರೂ.ವರೆಗೆ ಸಾಲ ವ್ಯವಸ್ಥೆ, ನೇಕಾರ ಸಮ್ಮಾನ ಯೋಜನೆ, ದೇವರದಾಸಿಮಯ್ಯ, ವಚನಕಾರರ ಜಯಂತಿಯನ್ನು ಪ್ರಾರಂಭಿಸಿದ್ದು ನಮ್ಮ ಸರ್ಕಾರ. ಸಮುದಾಯದ ಜನಪ್ರತಿನಿಧಿಗಳನ್ನು ಶಾಸಕರು ಮತ್ತು ಎಂಎಲ್ ಸಿ ಗಳಾಗಿದ್ದಾರೆ. ಹಿಂದುಳಿದ ಜಾತಿಗಳಿಗೆ ಜಮೀನು ನೀಡುವ ಚಿಂತನೆಯನ್ನು ಸರ್ಕಾರ ಹೊಂದಿದೆ. ನೇಕಾರರ ಅಭಿವೃದ್ಧಿ ನಿಗಮ ಸ್ಥಾಪಿಸುವ ಬೇಡಿಕೆಯಿದ್ದು, ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

9 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

9 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

13 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

13 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

13 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

14 hours ago