ರಾಜ್ಯ

ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ ‌20 ರಿಂದ 25ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.

ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನನ್ನ ಇಲಾಖೆಗೆ ಅಗತ್ಯವಾದ ಕೌಶಲ್ಯಗಳನ್ನು ಇಲ್ಲಿ ಕಲಿಸಲಾಗುತ್ತದೆ. ಇಲ್ಲಿ ಪದವಿ ಪಡೆದವರು ನಮ್ಮ ಇಲಾಖೆಗೆ ಹೆಚ್ಚು ಸೂಕ್ತವಾಗುತ್ತಾರೆ‌. ಈಗಾಗಲೇ ಸಾಕಷ್ಟು ಜನ ಕೆಲಸ ಮಾಡುತ್ತಿದ್ದಾರೆ. ಮುಂದಿನ ನೇಮಕಾತಿ ಸಂದರ್ಭದಲ್ಲಿ ಹೆಚ್ಚು ಆದ್ಯತೆ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವೆ, ಜೊತೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಕೌಶಾಲ್ಯಭಿವೃದ್ದಿ ಸಚಿವರ ಜೊತೆಗೂ ಚರ್ಚೆ ನಡೆಸಿ ಕೂಸಿನ ಮನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಹೆಚ್ಚು ಅವಕಾಶ ಸಿಗುವಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದರು.

ಈ ಹಿಂದೆ ಮಹಿಳೆಯರು ಅಡುಗೆ ಮನೆಗೆ ಸೀಮಿತರಾಗಿದ್ದರು. ಅಂತಹ ಸಂದರ್ಭದಲ್ಲಿ ಈ ಕಾಲೇಜು ಆರಂಭವಾಗಿದೆ. ಆ ಸಂದರ್ಭದಲ್ಲೂ ಸಾಕಷ್ಟು ಮಹಿಳೆಯರು ಈ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಕಲಿಯುವ ಉತ್ಸಾಹ ಇದ್ದರೆ, ಎಲ್ಲವೂ ಸಾಧ್ಯ ಎನ್ನುವುದನ್ನು ತೋರಿಸಿದ್ದಾರೆ. ಕೆಲವರಿಗೆ ಅವಕಾಶ ಕಡಿಮೆ ಸಿಗಬಹುದು, ಕೆಲವರಿಗೆ ಜಾಸ್ತಿ ಸಿಗಬಹುದು. ಆದರೆ ಅದನ್ನು ಸದುಪಯೋಗ ಪಡಿಸಿಕೊಳ್ಳುವ ಮನೋಭಾವ ಬೇಕು ಎಂದು ಸಚಿವರು ಹೇಳಿದರು.

ಈಗ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಮಾಜ ತುಂಬಾ ಬದಲಾಗಿದೆ. ಗಂಡಸರ ಯೋಚನಾ ರೀತಿ ಸಹ ಬದಲಾಗಿದೆ. ಗಂಡು ಹೆಣ್ಣು ಎಂಬ ಬೇಧ ಭಾವ ಉಳಿದಿಲ್ಲ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡಲಾಗುತ್ತಿದೆ. ನಮ್ಮ ದೇಶದ ಸಕಾರಾತ್ಮಕ ಬೆಳವಣಿಗೆಗೆ ಇದು ಕೂಡ ಕಾರಣವಾಗಿದೆ ಎಂದು ಹೇಳಿದರು.

ಧಾರವಾಡವನ್ನು ವಿದ್ಯಾಕಾಶಿ ಎಂದು ಕರೆಯುತ್ತೇವೆ. ಇಲ್ಲಿಯ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಶ್ವವಿದ್ಯಾಲಯಗಳು ನಮ್ಮ ಹೆಮ್ಮೆ ಎಂದು ಬಣ್ಣಿಸಿದರು.

ಆಂದೋಲನ ಡೆಸ್ಕ್

Recent Posts

ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ : ಆರೋಪಿ ಬಂಧನಕ್ಕೆ ದಸಂಸ ಆಗ್ರಹ

ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…

15 mins ago

ಉತ್ತಮ ಕೃಷಿಗೆ ಜೈವಿಕ ಗೊಬ್ಬರ ಬಳಸಿ : ತೋಟಗಾರಿಕೆ ವಿ.ವಿ ಕುಲಪತಿ ವಿಷ್ಣವರ್ಧನ ಸಲಹೆ

ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…

21 mins ago

ರಂಗಭೂಮಿ ಧರ್ಮಾತೀತ,ಜಾತ್ಯತೀತವಾದದ್ದು : ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣನೆ

ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ…

51 mins ago

ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ : ರಘುನಾಥ್‌ ಚ.ಹ, ಪ್ರಕಾಶ್‌ರಾಜ್‌ ಕೃತಿ ಆಯ್ಕೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…

2 hours ago

ಕೊಲೆ ಪ್ರಕರಣ | ಪವಿತ್ರಾ ಗೌಡಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…

2 hours ago

ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ : ತಂದೆ ನೆನೆದು ಸಚಿವ ಖಂಡ್ರೆ ಭಾವುಕ

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ…

3 hours ago