BJP's job is to abuse women: Minister Lakshmi Hebbalkar attacks MLC Ravi Kumar
ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.
ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನನ್ನ ಇಲಾಖೆಗೆ ಅಗತ್ಯವಾದ ಕೌಶಲ್ಯಗಳನ್ನು ಇಲ್ಲಿ ಕಲಿಸಲಾಗುತ್ತದೆ. ಇಲ್ಲಿ ಪದವಿ ಪಡೆದವರು ನಮ್ಮ ಇಲಾಖೆಗೆ ಹೆಚ್ಚು ಸೂಕ್ತವಾಗುತ್ತಾರೆ. ಈಗಾಗಲೇ ಸಾಕಷ್ಟು ಜನ ಕೆಲಸ ಮಾಡುತ್ತಿದ್ದಾರೆ. ಮುಂದಿನ ನೇಮಕಾತಿ ಸಂದರ್ಭದಲ್ಲಿ ಹೆಚ್ಚು ಆದ್ಯತೆ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವೆ, ಜೊತೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಕೌಶಾಲ್ಯಭಿವೃದ್ದಿ ಸಚಿವರ ಜೊತೆಗೂ ಚರ್ಚೆ ನಡೆಸಿ ಕೂಸಿನ ಮನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಹೆಚ್ಚು ಅವಕಾಶ ಸಿಗುವಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದರು.
ಈ ಹಿಂದೆ ಮಹಿಳೆಯರು ಅಡುಗೆ ಮನೆಗೆ ಸೀಮಿತರಾಗಿದ್ದರು. ಅಂತಹ ಸಂದರ್ಭದಲ್ಲಿ ಈ ಕಾಲೇಜು ಆರಂಭವಾಗಿದೆ. ಆ ಸಂದರ್ಭದಲ್ಲೂ ಸಾಕಷ್ಟು ಮಹಿಳೆಯರು ಈ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಕಲಿಯುವ ಉತ್ಸಾಹ ಇದ್ದರೆ, ಎಲ್ಲವೂ ಸಾಧ್ಯ ಎನ್ನುವುದನ್ನು ತೋರಿಸಿದ್ದಾರೆ. ಕೆಲವರಿಗೆ ಅವಕಾಶ ಕಡಿಮೆ ಸಿಗಬಹುದು, ಕೆಲವರಿಗೆ ಜಾಸ್ತಿ ಸಿಗಬಹುದು. ಆದರೆ ಅದನ್ನು ಸದುಪಯೋಗ ಪಡಿಸಿಕೊಳ್ಳುವ ಮನೋಭಾವ ಬೇಕು ಎಂದು ಸಚಿವರು ಹೇಳಿದರು.
ಈಗ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಮಾಜ ತುಂಬಾ ಬದಲಾಗಿದೆ. ಗಂಡಸರ ಯೋಚನಾ ರೀತಿ ಸಹ ಬದಲಾಗಿದೆ. ಗಂಡು ಹೆಣ್ಣು ಎಂಬ ಬೇಧ ಭಾವ ಉಳಿದಿಲ್ಲ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡಲಾಗುತ್ತಿದೆ. ನಮ್ಮ ದೇಶದ ಸಕಾರಾತ್ಮಕ ಬೆಳವಣಿಗೆಗೆ ಇದು ಕೂಡ ಕಾರಣವಾಗಿದೆ ಎಂದು ಹೇಳಿದರು.
ಧಾರವಾಡವನ್ನು ವಿದ್ಯಾಕಾಶಿ ಎಂದು ಕರೆಯುತ್ತೇವೆ. ಇಲ್ಲಿಯ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಶ್ವವಿದ್ಯಾಲಯಗಳು ನಮ್ಮ ಹೆಮ್ಮೆ ಎಂದು ಬಣ್ಣಿಸಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…