ರಾಜ್ಯ

ಕಂಪನಿಗಳು ನೌಕರರಿಗೆ ಹೆಚ್ಚುವರಿ ಗಂಟೆ ಕೆಲಸ ಮಾಡುವಂತೆ ಒತ್ತಾಯಿಸುವಂತಿಲ್ಲ: ಪ್ರಿಯಾಂಕ್‌ ಖರ್ಗೆ

ನವದೆಹಲಿ : ದೇಶದ ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಂಪನಿಗಳು ವ್ಯಕ್ತಿಗಳನ್ನು ಹೆಚ್ಚುವರಿ ಗಂಟೆಗಳ ಕಾಲ ಕೆಲಸ ಮಾಡುವಂತೆ ಒತ್ತಾಯಿಸುವಂತಿಲ್ಲ ಎಂದಿದ್ದಾರೆ. ಅಷ್ಟೆ ಅಲ್ಲದೆ ಕಂಪನಿಗಳು ‘ಬೆವರಿನ ಅಂಗಡಿ ನಡೆಸಲು ಸಾಧ್ಯವಿಲ್ಲ’ ಖಡಕ್ಕಾಗಿ ನುಡಿದಿದ್ದಾರೆ.

ಐಟಿ ಉದ್ಯಮಕ್ಕೆ ಎನ್‌ಆರ್‌ ನಾರಾಯಣ ಮೂರ್ತಿ ಅವರು ನೀಡಿರುವ ಕೊಡುಗೆ ಮತ್ತು ಅವರ ಬುದ್ಧಿವಂತಿಕೆಯನ್ನು ಶ್ಲಾಘಿಸಿದ ಪ್ರಿಯಾಂಕ್‌ ಖರ್ಗೆ, ಒಬ್ಬ ವ್ಯಕ್ತಿ ಎಷ್ಟು ಗಂಟೆಗಳ ಕಾಲ ದುಡಿಯಬೇಕು ಎಂದು ಸಮಯವನ್ನು ನಿಗದಿಪಡಿಸುವ ಬದಲು, ಕಂಪನಿಗಳು ತಮ್ಮ ವೃತ್ತಿಪರ ಕಾರ್ಯಯೋಜನೆಯಲ್ಲಿ ಎಷ್ಟು ಉತ್ಪಾದಕವಾಗಿವೆ ಎಂಬುದನ್ನು ನೋಡಬೇಕು ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಹಾಗೂ ಐಟಿ ಮತ್ತು ಟೆಕ್ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿರುವ ನಾರಾಯಣ ಮೂರ್ತಿಯವರ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್‌ ಖರ್ಗೆ, “ಇದು ಪ್ರತಿಯೊಬ್ಬರಿಗೂ ವಿಭಿನ್ನವಾದುದು. ಸಚಿವನಾಗಿ ನಾನು ಉತ್ಪಾದಕತೆಯ ಮೇಲೆ ಗಮನ ಕೇಂದ್ರೀಕರಿಸುತ್ತೇನೆ. ನೀವು ಏಳು ಗಂಟೆಗಳಲ್ಲಿ ಉತ್ಪಾದಕರಾಗಿದ್ದರೆ ನನಗೆ ಯಾವುದೇ ಅಭ್ಯಂತರವಿಲ್ಲ. ನಿಮ್ಮ ಉತ್ಪಾದಕತೆಯನ್ನು ಹೆಚ್ಚಿಸಲು ನಿಮ್ಮ ಇತರ ಏಳು ಗಂಟೆಗಳನ್ನು ಉಪಯೋಗಿಸಲು ನೀವು ಬಯಸಿದರೆ, ಅದು ಇಲಾಖೆ ಅಥವಾ ಸಚಿವಾಲಯಕ್ಕೆ ಸಹಾಯವಾಗುತ್ತದೆ ಎಂದಾದರೆ ನಾನು ನಿಮ್ಮ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಆದರೆ, ಇದನ್ನು (70 ಗಂಟೆಗಳ ಕೆಲಸ) ಮಾಡಲು ನಾವು ಯಾರನ್ನೂ ಒತ್ತಾಯಿಸಲು ಸಾಧ್ಯವಿಲ್ಲ. ನೀವು ಬೆವರಿನ ಅಂಗಡಿಗಳನ್ನು ನಡೆಸಲು ಸಾಧ್ಯವಿಲ್ಲ,” ಎಂದು ಹೇಳಿದ್ದಾರೆ.

ರಾಜ್ಯದಲ್ಲಿನ ಹೂಡಿಕೆಯ ಕುರಿತು ಮಾತನಾಡಿದ ಅವರು, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕ್ ವಾಹನಗಳು ಮತ್ತು ಸೆಮಿಕಂಡಕ್ಟರ್‌ ಕ್ಷೇತ್ರಗಳ ಕಂಪನಿಗಳನ್ನು ರಾಜ್ಯಕ್ಕೆ ಕರೆತರಲು ಕರ್ನಾಟಕವು ಪ್ರಯತ್ನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ನೀವು ಅಮೆರಿಕದ ದೈತ್ಯ ಕಂಪನಿ ಟೆಸ್ಲಾವನ್ನು ಸಂಪರ್ಕಿಸಿದ್ದೀರಾ ಎಂದು ಕೇಳಿದಾಗ, ಅಮೆರಿಕಾದ ಎಲೆಕ್ಟ್ರಿಕ್ ವಾಹನ ತಯಾರಕ ಸಂಸ್ಥೆಯು ಸದ್ಯದಲ್ಲೇ ಭಾರತಕ್ಕೆ ಕಾಲಿಡಲಿದೆ. ಕೆಲವು ಸಂಭಾಷಣೆಗಳು ನಡೆದಿವೆ ಎಂದು ಅವರು ತಿಳಿಸಿದ್ದಾರೆ. “ಈ ಹಂತದಲ್ಲಿ ನಾವು ಕೆಲವು ಪರೋಕ್ಷ ಸಂಭಾಷಣೆಗಳನ್ನು ನಡೆಸಿದ್ದೇವೆ,” ಎಂದಿದ್ದಾರೆ.

andolanait

Recent Posts

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

14 mins ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

17 mins ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

1 hour ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

5 hours ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

5 hours ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

5 hours ago