ರಾಜ್ಯ

ಕಂಪನಿಗಳು ನೌಕರರಿಗೆ ಹೆಚ್ಚುವರಿ ಗಂಟೆ ಕೆಲಸ ಮಾಡುವಂತೆ ಒತ್ತಾಯಿಸುವಂತಿಲ್ಲ: ಪ್ರಿಯಾಂಕ್‌ ಖರ್ಗೆ

ನವದೆಹಲಿ : ದೇಶದ ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಂಪನಿಗಳು ವ್ಯಕ್ತಿಗಳನ್ನು ಹೆಚ್ಚುವರಿ ಗಂಟೆಗಳ ಕಾಲ ಕೆಲಸ ಮಾಡುವಂತೆ ಒತ್ತಾಯಿಸುವಂತಿಲ್ಲ ಎಂದಿದ್ದಾರೆ. ಅಷ್ಟೆ ಅಲ್ಲದೆ ಕಂಪನಿಗಳು ‘ಬೆವರಿನ ಅಂಗಡಿ ನಡೆಸಲು ಸಾಧ್ಯವಿಲ್ಲ’ ಖಡಕ್ಕಾಗಿ ನುಡಿದಿದ್ದಾರೆ.

ಐಟಿ ಉದ್ಯಮಕ್ಕೆ ಎನ್‌ಆರ್‌ ನಾರಾಯಣ ಮೂರ್ತಿ ಅವರು ನೀಡಿರುವ ಕೊಡುಗೆ ಮತ್ತು ಅವರ ಬುದ್ಧಿವಂತಿಕೆಯನ್ನು ಶ್ಲಾಘಿಸಿದ ಪ್ರಿಯಾಂಕ್‌ ಖರ್ಗೆ, ಒಬ್ಬ ವ್ಯಕ್ತಿ ಎಷ್ಟು ಗಂಟೆಗಳ ಕಾಲ ದುಡಿಯಬೇಕು ಎಂದು ಸಮಯವನ್ನು ನಿಗದಿಪಡಿಸುವ ಬದಲು, ಕಂಪನಿಗಳು ತಮ್ಮ ವೃತ್ತಿಪರ ಕಾರ್ಯಯೋಜನೆಯಲ್ಲಿ ಎಷ್ಟು ಉತ್ಪಾದಕವಾಗಿವೆ ಎಂಬುದನ್ನು ನೋಡಬೇಕು ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಹಾಗೂ ಐಟಿ ಮತ್ತು ಟೆಕ್ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿರುವ ನಾರಾಯಣ ಮೂರ್ತಿಯವರ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್‌ ಖರ್ಗೆ, “ಇದು ಪ್ರತಿಯೊಬ್ಬರಿಗೂ ವಿಭಿನ್ನವಾದುದು. ಸಚಿವನಾಗಿ ನಾನು ಉತ್ಪಾದಕತೆಯ ಮೇಲೆ ಗಮನ ಕೇಂದ್ರೀಕರಿಸುತ್ತೇನೆ. ನೀವು ಏಳು ಗಂಟೆಗಳಲ್ಲಿ ಉತ್ಪಾದಕರಾಗಿದ್ದರೆ ನನಗೆ ಯಾವುದೇ ಅಭ್ಯಂತರವಿಲ್ಲ. ನಿಮ್ಮ ಉತ್ಪಾದಕತೆಯನ್ನು ಹೆಚ್ಚಿಸಲು ನಿಮ್ಮ ಇತರ ಏಳು ಗಂಟೆಗಳನ್ನು ಉಪಯೋಗಿಸಲು ನೀವು ಬಯಸಿದರೆ, ಅದು ಇಲಾಖೆ ಅಥವಾ ಸಚಿವಾಲಯಕ್ಕೆ ಸಹಾಯವಾಗುತ್ತದೆ ಎಂದಾದರೆ ನಾನು ನಿಮ್ಮ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಆದರೆ, ಇದನ್ನು (70 ಗಂಟೆಗಳ ಕೆಲಸ) ಮಾಡಲು ನಾವು ಯಾರನ್ನೂ ಒತ್ತಾಯಿಸಲು ಸಾಧ್ಯವಿಲ್ಲ. ನೀವು ಬೆವರಿನ ಅಂಗಡಿಗಳನ್ನು ನಡೆಸಲು ಸಾಧ್ಯವಿಲ್ಲ,” ಎಂದು ಹೇಳಿದ್ದಾರೆ.

ರಾಜ್ಯದಲ್ಲಿನ ಹೂಡಿಕೆಯ ಕುರಿತು ಮಾತನಾಡಿದ ಅವರು, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕ್ ವಾಹನಗಳು ಮತ್ತು ಸೆಮಿಕಂಡಕ್ಟರ್‌ ಕ್ಷೇತ್ರಗಳ ಕಂಪನಿಗಳನ್ನು ರಾಜ್ಯಕ್ಕೆ ಕರೆತರಲು ಕರ್ನಾಟಕವು ಪ್ರಯತ್ನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ನೀವು ಅಮೆರಿಕದ ದೈತ್ಯ ಕಂಪನಿ ಟೆಸ್ಲಾವನ್ನು ಸಂಪರ್ಕಿಸಿದ್ದೀರಾ ಎಂದು ಕೇಳಿದಾಗ, ಅಮೆರಿಕಾದ ಎಲೆಕ್ಟ್ರಿಕ್ ವಾಹನ ತಯಾರಕ ಸಂಸ್ಥೆಯು ಸದ್ಯದಲ್ಲೇ ಭಾರತಕ್ಕೆ ಕಾಲಿಡಲಿದೆ. ಕೆಲವು ಸಂಭಾಷಣೆಗಳು ನಡೆದಿವೆ ಎಂದು ಅವರು ತಿಳಿಸಿದ್ದಾರೆ. “ಈ ಹಂತದಲ್ಲಿ ನಾವು ಕೆಲವು ಪರೋಕ್ಷ ಸಂಭಾಷಣೆಗಳನ್ನು ನಡೆಸಿದ್ದೇವೆ,” ಎಂದಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago