ರಾಜ್ಯ

ಕಂಪನಿಗಳು ನೌಕರರಿಗೆ ಹೆಚ್ಚುವರಿ ಗಂಟೆ ಕೆಲಸ ಮಾಡುವಂತೆ ಒತ್ತಾಯಿಸುವಂತಿಲ್ಲ: ಪ್ರಿಯಾಂಕ್‌ ಖರ್ಗೆ

ನವದೆಹಲಿ : ದೇಶದ ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಂಪನಿಗಳು ವ್ಯಕ್ತಿಗಳನ್ನು ಹೆಚ್ಚುವರಿ ಗಂಟೆಗಳ ಕಾಲ ಕೆಲಸ ಮಾಡುವಂತೆ ಒತ್ತಾಯಿಸುವಂತಿಲ್ಲ ಎಂದಿದ್ದಾರೆ. ಅಷ್ಟೆ ಅಲ್ಲದೆ ಕಂಪನಿಗಳು ‘ಬೆವರಿನ ಅಂಗಡಿ ನಡೆಸಲು ಸಾಧ್ಯವಿಲ್ಲ’ ಖಡಕ್ಕಾಗಿ ನುಡಿದಿದ್ದಾರೆ.

ಐಟಿ ಉದ್ಯಮಕ್ಕೆ ಎನ್‌ಆರ್‌ ನಾರಾಯಣ ಮೂರ್ತಿ ಅವರು ನೀಡಿರುವ ಕೊಡುಗೆ ಮತ್ತು ಅವರ ಬುದ್ಧಿವಂತಿಕೆಯನ್ನು ಶ್ಲಾಘಿಸಿದ ಪ್ರಿಯಾಂಕ್‌ ಖರ್ಗೆ, ಒಬ್ಬ ವ್ಯಕ್ತಿ ಎಷ್ಟು ಗಂಟೆಗಳ ಕಾಲ ದುಡಿಯಬೇಕು ಎಂದು ಸಮಯವನ್ನು ನಿಗದಿಪಡಿಸುವ ಬದಲು, ಕಂಪನಿಗಳು ತಮ್ಮ ವೃತ್ತಿಪರ ಕಾರ್ಯಯೋಜನೆಯಲ್ಲಿ ಎಷ್ಟು ಉತ್ಪಾದಕವಾಗಿವೆ ಎಂಬುದನ್ನು ನೋಡಬೇಕು ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಹಾಗೂ ಐಟಿ ಮತ್ತು ಟೆಕ್ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿರುವ ನಾರಾಯಣ ಮೂರ್ತಿಯವರ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್‌ ಖರ್ಗೆ, “ಇದು ಪ್ರತಿಯೊಬ್ಬರಿಗೂ ವಿಭಿನ್ನವಾದುದು. ಸಚಿವನಾಗಿ ನಾನು ಉತ್ಪಾದಕತೆಯ ಮೇಲೆ ಗಮನ ಕೇಂದ್ರೀಕರಿಸುತ್ತೇನೆ. ನೀವು ಏಳು ಗಂಟೆಗಳಲ್ಲಿ ಉತ್ಪಾದಕರಾಗಿದ್ದರೆ ನನಗೆ ಯಾವುದೇ ಅಭ್ಯಂತರವಿಲ್ಲ. ನಿಮ್ಮ ಉತ್ಪಾದಕತೆಯನ್ನು ಹೆಚ್ಚಿಸಲು ನಿಮ್ಮ ಇತರ ಏಳು ಗಂಟೆಗಳನ್ನು ಉಪಯೋಗಿಸಲು ನೀವು ಬಯಸಿದರೆ, ಅದು ಇಲಾಖೆ ಅಥವಾ ಸಚಿವಾಲಯಕ್ಕೆ ಸಹಾಯವಾಗುತ್ತದೆ ಎಂದಾದರೆ ನಾನು ನಿಮ್ಮ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಆದರೆ, ಇದನ್ನು (70 ಗಂಟೆಗಳ ಕೆಲಸ) ಮಾಡಲು ನಾವು ಯಾರನ್ನೂ ಒತ್ತಾಯಿಸಲು ಸಾಧ್ಯವಿಲ್ಲ. ನೀವು ಬೆವರಿನ ಅಂಗಡಿಗಳನ್ನು ನಡೆಸಲು ಸಾಧ್ಯವಿಲ್ಲ,” ಎಂದು ಹೇಳಿದ್ದಾರೆ.

ರಾಜ್ಯದಲ್ಲಿನ ಹೂಡಿಕೆಯ ಕುರಿತು ಮಾತನಾಡಿದ ಅವರು, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕ್ ವಾಹನಗಳು ಮತ್ತು ಸೆಮಿಕಂಡಕ್ಟರ್‌ ಕ್ಷೇತ್ರಗಳ ಕಂಪನಿಗಳನ್ನು ರಾಜ್ಯಕ್ಕೆ ಕರೆತರಲು ಕರ್ನಾಟಕವು ಪ್ರಯತ್ನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ನೀವು ಅಮೆರಿಕದ ದೈತ್ಯ ಕಂಪನಿ ಟೆಸ್ಲಾವನ್ನು ಸಂಪರ್ಕಿಸಿದ್ದೀರಾ ಎಂದು ಕೇಳಿದಾಗ, ಅಮೆರಿಕಾದ ಎಲೆಕ್ಟ್ರಿಕ್ ವಾಹನ ತಯಾರಕ ಸಂಸ್ಥೆಯು ಸದ್ಯದಲ್ಲೇ ಭಾರತಕ್ಕೆ ಕಾಲಿಡಲಿದೆ. ಕೆಲವು ಸಂಭಾಷಣೆಗಳು ನಡೆದಿವೆ ಎಂದು ಅವರು ತಿಳಿಸಿದ್ದಾರೆ. “ಈ ಹಂತದಲ್ಲಿ ನಾವು ಕೆಲವು ಪರೋಕ್ಷ ಸಂಭಾಷಣೆಗಳನ್ನು ನಡೆಸಿದ್ದೇವೆ,” ಎಂದಿದ್ದಾರೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

8 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

21 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

22 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

22 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

22 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

22 hours ago