ರಾಜ್ಯ

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಒಂದ್ಕಡೆ ಮುಸ್ಲಿಂ ಸಮುದಾಯದಲ್ಲಿ ಸಚಿವ ಜಮೀರ್‌ ಅಹ್ಮದ್‌ ಪರ ಸಿದ್ದರಾಮಯ್ಯ ಅವರು ಒಲವು ತೋರಿದ್ದಾರೆ. ಇತ್ತ ಡಿಕೆಶಿ ಬಣದಿಂದ ಮೊಹಮ್ಮದ್‌ ಹ್ಯಾರಿಸ್‌ ಹಾಗೂ ಯು.ಟಿ ಖಾದರ್‌ ಹೆಸರು ಮುನ್ನೆಲೆಗೆ ಬಂದಿದೆ.

ಇನ್ನೂ ದಲಿತ ಸಮುದಾಯದಲ್ಲಿ ಪ್ರಿಯಾಂಕ್‌ ಖರ್ಗೆ ಹಾಗೂ ಜಿ. ಪರಮೇಶ್ವರ್‌ ಅವರ ನಡುವೆ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ. ಆದರೆ ಇಬ್ಬರು ಬಲ‌ಗೈ ಸಮುದಾಯದವರು ಈ ಹಿಂದೆಯೂ ಡಿಸಿಎಂ ಹುದ್ದೆ ಆ ವರ್ಗಕ್ಕೆ ಸಿಕ್ಕಿದೆ. ಈ ಬಾರಿ ಎಡಗೈ ಸಮುದಾಯಕ್ಕೆ ಕೊಡಿ‌ ಎಂದು ಮುನಿಯಪ್ಪ ಪಟ್ಟು ಹಿಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ರೇಸ್‌ನಿಂದ ಲಿಂಗಾಯತ ಸಮುದಾಯ ಔಟ್ ಆದ್ರೆ, ಡಿಸಿಎಂ ಹುದ್ದೆ ಫಿಕ್ಸ್‌ ಆಗಬಹುದು ಎಂದು ಹೇಳಲಾಗಿದೆ. ಆದ್ರೆ ಡಿಸಿಎಂ ಹುದ್ದೆಗೂ ಎಂ.ಬಿ ಪಾಟೀಲ್‌ ಹಾಗೂ ಈಶ್ವರ್‌ ಖಂಡ್ರೆ ನಡುವೆ ಫೈಟ್‌ ಜೋರಾಗಿದೆ.

ಈ ಬೆಳವಣಿಗೆ ನಡುವೆ ಸಚಿವ ಸ್ಥಾನಕ್ಕೆ ಲಾಭಿ ಜೋರಾಗಿದ್ದು, ಸಂತೋಷ್‌ ಲಾಡ್, ಪ್ರಿಯಾಂಕ್‌ ಖರ್ಗೆ, ಮಧು ಬಂಗಾರಪ್ಪ ಅವರು ಡಿ.ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದಾರೆ. ಶಾಸಕರಾದ ಬಂಗಾರಪೇಟೆ ನಾರಾಯಣ ಸ್ವಾಮಿ, ಗಣೇಶ್ ಹುಕ್ಕೇರಿ ಡಿಕೆಶಿ ಭೇಟಿಗೆ ಆಗಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

36 mins ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

39 mins ago

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…

41 mins ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

42 mins ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

48 mins ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

52 mins ago