ಬಾಗಲಕೋಟೆ: ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು ಸಾಮಾನ್ಯ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಈ ಕುರಿತು ಬಾಗಲಕೋಟೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು, ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು ಸಾಮಾನ್ಯ. ಸಾಯುವವರೆಗೂ ಕೆಲವರಿಗೆ ಸಿಎಂ ಆಗಿ ಅಧಿಕಾರ ಸಿಗುವುದಿಲ್ಲ. ಆದ್ದರಿಂದ ಅದೇನು ವಿಶೇಷ ಬೆಳವಣಿಗೆ ಏನಲ್ಲ. ಅಧಿಕಾರಕ್ಕಾಗಿ ಪೈಪೋಟಿ ಇದ್ದೇ ಇರುತ್ತದೆ. ಅಧಿಕಾರವನ್ನು ವಾಮ ಮಾರ್ಗದ ಮೂಲಕ ಸಾಧಿಸಬಾರದು ಎಂದು ಹೇಳಿದ್ದಾರೆ.
ಈಗ ಸಿದ್ದರಾಮಯ್ಯ ನಾನೇ ಐದು ವರ್ಷ ಆಡಳಿತ ಮಾಡುತ್ತೇನೆ ಎನ್ನುತ್ತಾರೆ. ಆಸೆ ಇರುವುದು ಸಹಜ. ಆ ಬಗ್ಗೆ ತಪ್ಪು ತಿಳಿದುಕೊಳ್ಳುವುದಕ್ಕೆ ಆಗುವುದಿಲ್ಲ. ಡಿಸಿಎಂ ಆದವರಿಗೆ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವೊಂದು ಸಲ ಡಿಸಿಎಂ ಆಗಿಯೇ ನಿವೃತ್ತಿ ಆಗಬಹುದು. ನನಗೆ ಅಧಿಕಾರ ಸಿಗಲಿಲ್ಲ ಎಂಬ ಪಶ್ಚಾತ್ತಾಪ ಪಡುವುದು ಬೇಡ. ಎಷ್ಟು ವರ್ಷ ಸಿಎಂ ಆಗಿದ್ದೇನೆ ಎನ್ನುವುದು ಮುಖ್ಯವಲ್ಲ. ಸಿಎಂ ಆಗಿದ್ದವರಿಗೆ ಮುಂದುವರಿಯಬೇಕೆಂಬ ಆಸೆ ಇರುತ್ತದೆ ಎಂದರು.
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…