ಬಾಗಲಕೋಟೆ: ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು ಸಾಮಾನ್ಯ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಈ ಕುರಿತು ಬಾಗಲಕೋಟೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು, ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು ಸಾಮಾನ್ಯ. ಸಾಯುವವರೆಗೂ ಕೆಲವರಿಗೆ ಸಿಎಂ ಆಗಿ ಅಧಿಕಾರ ಸಿಗುವುದಿಲ್ಲ. ಆದ್ದರಿಂದ ಅದೇನು ವಿಶೇಷ ಬೆಳವಣಿಗೆ ಏನಲ್ಲ. ಅಧಿಕಾರಕ್ಕಾಗಿ ಪೈಪೋಟಿ ಇದ್ದೇ ಇರುತ್ತದೆ. ಅಧಿಕಾರವನ್ನು ವಾಮ ಮಾರ್ಗದ ಮೂಲಕ ಸಾಧಿಸಬಾರದು ಎಂದು ಹೇಳಿದ್ದಾರೆ.
ಈಗ ಸಿದ್ದರಾಮಯ್ಯ ನಾನೇ ಐದು ವರ್ಷ ಆಡಳಿತ ಮಾಡುತ್ತೇನೆ ಎನ್ನುತ್ತಾರೆ. ಆಸೆ ಇರುವುದು ಸಹಜ. ಆ ಬಗ್ಗೆ ತಪ್ಪು ತಿಳಿದುಕೊಳ್ಳುವುದಕ್ಕೆ ಆಗುವುದಿಲ್ಲ. ಡಿಸಿಎಂ ಆದವರಿಗೆ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವೊಂದು ಸಲ ಡಿಸಿಎಂ ಆಗಿಯೇ ನಿವೃತ್ತಿ ಆಗಬಹುದು. ನನಗೆ ಅಧಿಕಾರ ಸಿಗಲಿಲ್ಲ ಎಂಬ ಪಶ್ಚಾತ್ತಾಪ ಪಡುವುದು ಬೇಡ. ಎಷ್ಟು ವರ್ಷ ಸಿಎಂ ಆಗಿದ್ದೇನೆ ಎನ್ನುವುದು ಮುಖ್ಯವಲ್ಲ. ಸಿಎಂ ಆಗಿದ್ದವರಿಗೆ ಮುಂದುವರಿಯಬೇಕೆಂಬ ಆಸೆ ಇರುತ್ತದೆ ಎಂದರು.
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…