ಬಾಗಲಕೋಟೆ: ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು ಸಾಮಾನ್ಯ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಈ ಕುರಿತು ಬಾಗಲಕೋಟೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು, ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು ಸಾಮಾನ್ಯ. ಸಾಯುವವರೆಗೂ ಕೆಲವರಿಗೆ ಸಿಎಂ ಆಗಿ ಅಧಿಕಾರ ಸಿಗುವುದಿಲ್ಲ. ಆದ್ದರಿಂದ ಅದೇನು ವಿಶೇಷ ಬೆಳವಣಿಗೆ ಏನಲ್ಲ. ಅಧಿಕಾರಕ್ಕಾಗಿ ಪೈಪೋಟಿ ಇದ್ದೇ ಇರುತ್ತದೆ. ಅಧಿಕಾರವನ್ನು ವಾಮ ಮಾರ್ಗದ ಮೂಲಕ ಸಾಧಿಸಬಾರದು ಎಂದು ಹೇಳಿದ್ದಾರೆ.
ಈಗ ಸಿದ್ದರಾಮಯ್ಯ ನಾನೇ ಐದು ವರ್ಷ ಆಡಳಿತ ಮಾಡುತ್ತೇನೆ ಎನ್ನುತ್ತಾರೆ. ಆಸೆ ಇರುವುದು ಸಹಜ. ಆ ಬಗ್ಗೆ ತಪ್ಪು ತಿಳಿದುಕೊಳ್ಳುವುದಕ್ಕೆ ಆಗುವುದಿಲ್ಲ. ಡಿಸಿಎಂ ಆದವರಿಗೆ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವೊಂದು ಸಲ ಡಿಸಿಎಂ ಆಗಿಯೇ ನಿವೃತ್ತಿ ಆಗಬಹುದು. ನನಗೆ ಅಧಿಕಾರ ಸಿಗಲಿಲ್ಲ ಎಂಬ ಪಶ್ಚಾತ್ತಾಪ ಪಡುವುದು ಬೇಡ. ಎಷ್ಟು ವರ್ಷ ಸಿಎಂ ಆಗಿದ್ದೇನೆ ಎನ್ನುವುದು ಮುಖ್ಯವಲ್ಲ. ಸಿಎಂ ಆಗಿದ್ದವರಿಗೆ ಮುಂದುವರಿಯಬೇಕೆಂಬ ಆಸೆ ಇರುತ್ತದೆ ಎಂದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…