ರಾಜ್ಯ

ರಾಜಕೀಯದಲ್ಲಿ ಅಧಿಕಾರಕ್ಕೆ ಪೈಪೋಟಿ ಸಾಮಾನ್ಯ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಬಾಗಲಕೋಟೆ: ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು ಸಾಮಾನ್ಯ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಈ ಕುರಿತು ಬಾಗಲಕೋಟೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು, ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು ಸಾಮಾನ್ಯ. ಸಾಯುವವರೆಗೂ ಕೆಲವರಿಗೆ ಸಿಎಂ ಆಗಿ ಅಧಿಕಾರ ಸಿಗುವುದಿಲ್ಲ. ಆದ್ದರಿಂದ ಅದೇನು ವಿಶೇಷ ಬೆಳವಣಿಗೆ ಏನಲ್ಲ. ಅಧಿಕಾರಕ್ಕಾಗಿ ಪೈಪೋಟಿ ಇದ್ದೇ ಇರುತ್ತದೆ. ಅಧಿಕಾರವನ್ನು ವಾಮ ಮಾರ್ಗದ ಮೂಲಕ ಸಾಧಿಸಬಾರದು ಎಂದು ಹೇಳಿದ್ದಾರೆ.

ಈಗ ಸಿದ್ದರಾಮಯ್ಯ ನಾನೇ ಐದು ವರ್ಷ ಆಡಳಿತ ಮಾಡುತ್ತೇನೆ ಎನ್ನುತ್ತಾರೆ. ಆಸೆ ಇರುವುದು ಸಹಜ. ಆ ಬಗ್ಗೆ ತಪ್ಪು ತಿಳಿದುಕೊಳ್ಳುವುದಕ್ಕೆ ಆಗುವುದಿಲ್ಲ. ಡಿಸಿಎಂ ಆದವರಿಗೆ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವೊಂದು ಸಲ ಡಿಸಿಎಂ ಆಗಿಯೇ ನಿವೃತ್ತಿ ಆಗಬಹುದು. ನನಗೆ ಅಧಿಕಾರ ಸಿಗಲಿಲ್ಲ ಎಂಬ ಪಶ್ಚಾತ್ತಾಪ ಪಡುವುದು ಬೇಡ. ಎಷ್ಟು ವರ್ಷ ಸಿಎಂ ಆಗಿದ್ದೇನೆ ಎನ್ನುವುದು ಮುಖ್ಯವಲ್ಲ. ಸಿಎಂ ಆಗಿದ್ದವರಿಗೆ ಮುಂದುವರಿಯಬೇಕೆಂಬ ಆಸೆ ಇರುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

30 mins ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

51 mins ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

5 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

7 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

8 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

8 hours ago