ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಗಾದಿಗೆ ಪೈಪೋಟಿ ನಡೆಯುತ್ತಿದೆ. ದಿನೇ ದಿನೇ ಅದು ದೊಡ್ಡದಾಗುತ್ತಿದೆ. ಸಿದ್ದು ಹಾಗೂ ಡಿಕೆಶಿ ಪರ-ವಿರುದ್ಧ ಹೇಳಿಕೆಗಳನ್ನು ಶಾಸಕರು ಕೊಡುತ್ತಿದ್ದಾರೆ. ಪರಿಣಾಮ ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯಲಿದೆ ಎಂದು ಭವಿಷ್ಯ ನುಡಿದರು.
ಇನ್ನು ಮೊನ್ನೆ ಡಿಕೆಶಿ ಅವರು ನಟ್ ಮತ್ತು ಬೋಲ್ಟ್ ಟೈಟ್ ಮಾಡುವ ಅಹಂನಿಂದ ಕೂಡಿದ ಹೇಳಿಕೆ ಕೊಟ್ಟಿದ್ದಾರೆ. ಶಿವಕುಮಾರ್ ಅವರ ಹೇಳಿಕೆ ಚಿತ್ರರಂಗದ ಬಗ್ಗೆ ಹೇಳಿದ್ದಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಶಿವಕುಮಾರ್ ಅವರಿಗೆ ಸಿಎಂ ಆಗಲು ಅವಕಾಶ ನೀಡುತ್ತಿಲ್ಲವೋ ಅವರಿಗೆ ಒಂದು ರೀತಿಯ ಎಚ್ಚರಿಕೆಯ ಮಾತನ್ನು ಹೇಳಿದ್ದಾರೆ. ಈ ಬಗ್ಗೆ ಎಲ್ಲರೂ ಚರ್ಚೆ ನಡೆಸುತ್ತಿದ್ದಾರೆ ಎಂದು ವಿವರಣೆ ನೀಡಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…