ಮಂಗಳೂರು: ಧರ್ಮಸ್ಥಳದ ವಿವಿಧ ಸ್ಥಳಗಳಲ್ಲಿ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ಮತ್ತೊಂದು ಹೊಸ ಜಾಗ ತೋರಿಸಿದ್ದಾನೆ.
ಧರ್ಮಸ್ಥಳದ ಕನ್ಯಾಡಿ ಬಳಿ ದೂರುದಾರ ಹೊಸ ಜಾಗ ತೋರಿಸಿದ್ದು, ಆ ಸ್ಥಳದಲ್ಲೂ ಎಸ್ಐಟಿ ಅಧಿಕಾರಿಗಳು ಇಂದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹಾಗೂ ಎಸ್ಐಟಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.





