ರಾಜ್ಯ

ಧರ್ಮಸ್ಥಳ | ಹದಿನೈದು ಕಡೆ ಶವ ಹೂತಿದ ಜಾಗ ತೋರಿದ ದೂರುದಾರ : ಹೊರತೆಗೆಯಲು ಸಿದ್ದತೆ

ಮಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ‌ಅಸಹಜ ಸಾವಿನ ಪ್ರಕರಣದಲ್ಲಿ ಶವ ಹೂತಿರುವ ಜಾಗವನ್ನು ದೂರುದಾರ ಇಂದು ಬೆಳಿಗ್ಗೆ ವಿಶೇಷ ‌ತನಿಖಾ ತಂಡಕ್ಕೆ ತೋರಿಸಿದ್ದಾರೆ.

ತನಿಖಾಧಿಕಾರಿ ಅನುಚೇತ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಲ್ಲಿ ದೂರುದಾರನನ್ನು ಸ್ಥಳಕ್ಕೆ ಕರೆದೊಯ್ಯಲಾಯಿತು. ಧರ್ಮಸ್ಥಳದ ನೇತ್ರಾವತಿ ನದಿ ದಂಡೆಯಲ್ಲಿರುವ ಸ್ನಾನ ಘಟ್ಟದ ಪಕ್ಕದ ಕಾಡಿಗೆ ತಂಡವನ್ನು ಕರೆದೊಯ್ದ ದೂರುದಾರ ಹದಿನೈದು ಕಡೆ ಶವ ಹೂತಿರುವ ಜಾಗವನ್ನು ತನಿಖಾ ತಂಡಕ್ಕೆ ತೋರಿಸಿದ್ದಾರೆ. ಸ್ಥಳದ ಮಹಜರು ನಡೆಸಿದ ಪೊಲೀಸರು ಶವವನ್ನು ಹೊರ ತೆಗೆಯಲು ಸಿದ್ಧತೆ ನಡೆಸಿದ್ದಾರೆ.

ಈಗಾಗಲೇ ದೂರುದಾರ ತಲೆಬುರುಡೆಯೊಂದನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ಅದರಲ್ಲಿ ಅಂಟಿಕೊಂಡಿರುವ ಮಣ್ಣನ್ನು ಈ ಶವ ಹೂತಿರುವ ಗುಂಡಿಯ ಮಣ್ಣಿನದೇ ಎಂದು ಪರೀಕ್ಷಿಸಬೇಕಿದೆ. ಶವದ ಡಿಎನ್ಎ ಪರೀಕ್ಷೆ ನಡೆಸಿ ಶವ ಯಾರದು ಎಂಬುದನ್ನು ಪತ್ತೆ ಹಚ್ಚಬೇಕಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಸೈಮನ್, ದೂರುದಾರನ ಪರ ಮೂವರು ವಕೀಲರು ಹಾಜರಿದ್ದರು. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

26 mins ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

37 mins ago

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

1 hour ago

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

2 hours ago

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

3 hours ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

3 hours ago