ರಾಜ್ಯ

ಧರ್ಮಸ್ಥಳ | ಹದಿನೈದು ಕಡೆ ಶವ ಹೂತಿದ ಜಾಗ ತೋರಿದ ದೂರುದಾರ : ಹೊರತೆಗೆಯಲು ಸಿದ್ದತೆ

ಮಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ‌ಅಸಹಜ ಸಾವಿನ ಪ್ರಕರಣದಲ್ಲಿ ಶವ ಹೂತಿರುವ ಜಾಗವನ್ನು ದೂರುದಾರ ಇಂದು ಬೆಳಿಗ್ಗೆ ವಿಶೇಷ ‌ತನಿಖಾ ತಂಡಕ್ಕೆ ತೋರಿಸಿದ್ದಾರೆ.

ತನಿಖಾಧಿಕಾರಿ ಅನುಚೇತ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಲ್ಲಿ ದೂರುದಾರನನ್ನು ಸ್ಥಳಕ್ಕೆ ಕರೆದೊಯ್ಯಲಾಯಿತು. ಧರ್ಮಸ್ಥಳದ ನೇತ್ರಾವತಿ ನದಿ ದಂಡೆಯಲ್ಲಿರುವ ಸ್ನಾನ ಘಟ್ಟದ ಪಕ್ಕದ ಕಾಡಿಗೆ ತಂಡವನ್ನು ಕರೆದೊಯ್ದ ದೂರುದಾರ ಹದಿನೈದು ಕಡೆ ಶವ ಹೂತಿರುವ ಜಾಗವನ್ನು ತನಿಖಾ ತಂಡಕ್ಕೆ ತೋರಿಸಿದ್ದಾರೆ. ಸ್ಥಳದ ಮಹಜರು ನಡೆಸಿದ ಪೊಲೀಸರು ಶವವನ್ನು ಹೊರ ತೆಗೆಯಲು ಸಿದ್ಧತೆ ನಡೆಸಿದ್ದಾರೆ.

ಈಗಾಗಲೇ ದೂರುದಾರ ತಲೆಬುರುಡೆಯೊಂದನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ಅದರಲ್ಲಿ ಅಂಟಿಕೊಂಡಿರುವ ಮಣ್ಣನ್ನು ಈ ಶವ ಹೂತಿರುವ ಗುಂಡಿಯ ಮಣ್ಣಿನದೇ ಎಂದು ಪರೀಕ್ಷಿಸಬೇಕಿದೆ. ಶವದ ಡಿಎನ್ಎ ಪರೀಕ್ಷೆ ನಡೆಸಿ ಶವ ಯಾರದು ಎಂಬುದನ್ನು ಪತ್ತೆ ಹಚ್ಚಬೇಕಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಸೈಮನ್, ದೂರುದಾರನ ಪರ ಮೂವರು ವಕೀಲರು ಹಾಜರಿದ್ದರು. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

2 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

2 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

2 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

3 hours ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

12 hours ago