ರಾಜ್ಯ

ಧರ್ಮಸ್ಥಳ | ಹದಿನೈದು ಕಡೆ ಶವ ಹೂತಿದ ಜಾಗ ತೋರಿದ ದೂರುದಾರ : ಹೊರತೆಗೆಯಲು ಸಿದ್ದತೆ

ಮಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ‌ಅಸಹಜ ಸಾವಿನ ಪ್ರಕರಣದಲ್ಲಿ ಶವ ಹೂತಿರುವ ಜಾಗವನ್ನು ದೂರುದಾರ ಇಂದು ಬೆಳಿಗ್ಗೆ ವಿಶೇಷ ‌ತನಿಖಾ ತಂಡಕ್ಕೆ ತೋರಿಸಿದ್ದಾರೆ.

ತನಿಖಾಧಿಕಾರಿ ಅನುಚೇತ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಲ್ಲಿ ದೂರುದಾರನನ್ನು ಸ್ಥಳಕ್ಕೆ ಕರೆದೊಯ್ಯಲಾಯಿತು. ಧರ್ಮಸ್ಥಳದ ನೇತ್ರಾವತಿ ನದಿ ದಂಡೆಯಲ್ಲಿರುವ ಸ್ನಾನ ಘಟ್ಟದ ಪಕ್ಕದ ಕಾಡಿಗೆ ತಂಡವನ್ನು ಕರೆದೊಯ್ದ ದೂರುದಾರ ಹದಿನೈದು ಕಡೆ ಶವ ಹೂತಿರುವ ಜಾಗವನ್ನು ತನಿಖಾ ತಂಡಕ್ಕೆ ತೋರಿಸಿದ್ದಾರೆ. ಸ್ಥಳದ ಮಹಜರು ನಡೆಸಿದ ಪೊಲೀಸರು ಶವವನ್ನು ಹೊರ ತೆಗೆಯಲು ಸಿದ್ಧತೆ ನಡೆಸಿದ್ದಾರೆ.

ಈಗಾಗಲೇ ದೂರುದಾರ ತಲೆಬುರುಡೆಯೊಂದನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ಅದರಲ್ಲಿ ಅಂಟಿಕೊಂಡಿರುವ ಮಣ್ಣನ್ನು ಈ ಶವ ಹೂತಿರುವ ಗುಂಡಿಯ ಮಣ್ಣಿನದೇ ಎಂದು ಪರೀಕ್ಷಿಸಬೇಕಿದೆ. ಶವದ ಡಿಎನ್ಎ ಪರೀಕ್ಷೆ ನಡೆಸಿ ಶವ ಯಾರದು ಎಂಬುದನ್ನು ಪತ್ತೆ ಹಚ್ಚಬೇಕಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಸೈಮನ್, ದೂರುದಾರನ ಪರ ಮೂವರು ವಕೀಲರು ಹಾಜರಿದ್ದರು. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

24 mins ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

12 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

14 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

15 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

16 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

18 hours ago