Dharmasthala Case sit investigation
ಮಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಪ್ರಕರಣದಲ್ಲಿ ಶವ ಹೂತಿರುವ ಜಾಗವನ್ನು ದೂರುದಾರ ಇಂದು ಬೆಳಿಗ್ಗೆ ವಿಶೇಷ ತನಿಖಾ ತಂಡಕ್ಕೆ ತೋರಿಸಿದ್ದಾರೆ.
ತನಿಖಾಧಿಕಾರಿ ಅನುಚೇತ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಲ್ಲಿ ದೂರುದಾರನನ್ನು ಸ್ಥಳಕ್ಕೆ ಕರೆದೊಯ್ಯಲಾಯಿತು. ಧರ್ಮಸ್ಥಳದ ನೇತ್ರಾವತಿ ನದಿ ದಂಡೆಯಲ್ಲಿರುವ ಸ್ನಾನ ಘಟ್ಟದ ಪಕ್ಕದ ಕಾಡಿಗೆ ತಂಡವನ್ನು ಕರೆದೊಯ್ದ ದೂರುದಾರ ಹದಿನೈದು ಕಡೆ ಶವ ಹೂತಿರುವ ಜಾಗವನ್ನು ತನಿಖಾ ತಂಡಕ್ಕೆ ತೋರಿಸಿದ್ದಾರೆ. ಸ್ಥಳದ ಮಹಜರು ನಡೆಸಿದ ಪೊಲೀಸರು ಶವವನ್ನು ಹೊರ ತೆಗೆಯಲು ಸಿದ್ಧತೆ ನಡೆಸಿದ್ದಾರೆ.
ಈಗಾಗಲೇ ದೂರುದಾರ ತಲೆಬುರುಡೆಯೊಂದನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ಅದರಲ್ಲಿ ಅಂಟಿಕೊಂಡಿರುವ ಮಣ್ಣನ್ನು ಈ ಶವ ಹೂತಿರುವ ಗುಂಡಿಯ ಮಣ್ಣಿನದೇ ಎಂದು ಪರೀಕ್ಷಿಸಬೇಕಿದೆ. ಶವದ ಡಿಎನ್ಎ ಪರೀಕ್ಷೆ ನಡೆಸಿ ಶವ ಯಾರದು ಎಂಬುದನ್ನು ಪತ್ತೆ ಹಚ್ಚಬೇಕಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಸೈಮನ್, ದೂರುದಾರನ ಪರ ಮೂವರು ವಕೀಲರು ಹಾಜರಿದ್ದರು. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…