Dharmasthala Case sit investigation
ಮಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಪ್ರಕರಣದಲ್ಲಿ ಶವ ಹೂತಿರುವ ಜಾಗವನ್ನು ದೂರುದಾರ ಇಂದು ಬೆಳಿಗ್ಗೆ ವಿಶೇಷ ತನಿಖಾ ತಂಡಕ್ಕೆ ತೋರಿಸಿದ್ದಾರೆ.
ತನಿಖಾಧಿಕಾರಿ ಅನುಚೇತ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಲ್ಲಿ ದೂರುದಾರನನ್ನು ಸ್ಥಳಕ್ಕೆ ಕರೆದೊಯ್ಯಲಾಯಿತು. ಧರ್ಮಸ್ಥಳದ ನೇತ್ರಾವತಿ ನದಿ ದಂಡೆಯಲ್ಲಿರುವ ಸ್ನಾನ ಘಟ್ಟದ ಪಕ್ಕದ ಕಾಡಿಗೆ ತಂಡವನ್ನು ಕರೆದೊಯ್ದ ದೂರುದಾರ ಹದಿನೈದು ಕಡೆ ಶವ ಹೂತಿರುವ ಜಾಗವನ್ನು ತನಿಖಾ ತಂಡಕ್ಕೆ ತೋರಿಸಿದ್ದಾರೆ. ಸ್ಥಳದ ಮಹಜರು ನಡೆಸಿದ ಪೊಲೀಸರು ಶವವನ್ನು ಹೊರ ತೆಗೆಯಲು ಸಿದ್ಧತೆ ನಡೆಸಿದ್ದಾರೆ.
ಈಗಾಗಲೇ ದೂರುದಾರ ತಲೆಬುರುಡೆಯೊಂದನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ಅದರಲ್ಲಿ ಅಂಟಿಕೊಂಡಿರುವ ಮಣ್ಣನ್ನು ಈ ಶವ ಹೂತಿರುವ ಗುಂಡಿಯ ಮಣ್ಣಿನದೇ ಎಂದು ಪರೀಕ್ಷಿಸಬೇಕಿದೆ. ಶವದ ಡಿಎನ್ಎ ಪರೀಕ್ಷೆ ನಡೆಸಿ ಶವ ಯಾರದು ಎಂಬುದನ್ನು ಪತ್ತೆ ಹಚ್ಚಬೇಕಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಸೈಮನ್, ದೂರುದಾರನ ಪರ ಮೂವರು ವಕೀಲರು ಹಾಜರಿದ್ದರು. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…
ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…
ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…
ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…