girish mattanna
ಬೆಂಗಳೂರು : ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ವಿರೋಧಿಸಿ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ್ ಅವರ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಮಹಿಳೆಯರ ಜೊತೆ ಆಗಮಿಸಿ ಬೆಂಗಳೂರಿನಲ್ಲಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಸಾಮೂಹಿಕ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಹಿತ ಮಹಿಳಾ ಆಯೋಗಕ್ಕೆ ನೀಡಿ ದೂರು ನೀಡಿದ್ದಾರೆ. ಈ ವೇಳೆ ಮಾತನಾಡಿದ ಕಾವೇರಿ ಹೆಣ್ಣುಮಕ್ಕಳ ಘನತೆಗೆ ಧಕ್ಕೆಯಾಗುವಂತೆ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತರ ಮೇಲೆ ತುಂಬಾ ಹೀನವಾಗಿ ಮಾತಾಡಿದ್ದಾರೆ. ಕೇವಲ ಬಡವರು ಮಾತ್ರವಲ್ಲ, ಹರಕೆ ಹೊತ್ತು ಧರ್ಮಸ್ಥಳದಲ್ಲಿ ಮದುವೆ ಆಗುತ್ತಾರೆ. ಸಾವಿರಾರು ಕುಟುಂಬಗಳು ಅಲ್ಲಿ ಮದುವೆಯಾಗಿ ಉತ್ತಮ ಜೀವನ ನಡೆಸುತ್ತಿದ್ದಾರೆ. ಅಂತಹ ಹೆಣ್ಣುಮಕ್ಕಳನ್ನು ಅವಮಾನಿಸುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಶ್ರೀಕ್ಷೇತ್ರದ ಬಗ್ಗೆ ಅಸಹ್ಯವಾಗಿ ಮಾತನಾಡಿದ್ದು ಮಾತ್ರವಲ್ಲ, ಸಾಮೂಹಿಕ ಮದುವೆಯಾದ ಎಲ್ಲರನ್ನೂ ಅವಹೇಳನ ಮಾಡಿದ್ದಾರೆ. ಈ ಬಗ್ಗೆ ಕೂಡಲೇ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…