ಬೆಂಗಳೂರು: ಸಂತ್ರಸ್ಥ ಮಹಿಳೆ ದೂರಿನ ಆಧಾರದ ಮೇಲೆ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ(ಅಕ್ಟೋಬರ್ 8) ಎಫ್ಐಆರ್ ದಾಖಲಿಸಲಾಗಿದೆ.
ಸಂತ್ರಸ್ಥ ಮಹಿಳೆಯು ತನ್ನ ಮೇಲೆ ಅತ್ಯಾಚಾರ ಎಸಗಿ ಕಿರುಕುಳ ನೀಡಿದ್ದಾರೆಂದು ದೂರು ದಾಖಲಿಸಿದ್ದರು. ಬಳಿಕ ಈ ದೂರಿನ ಆಧಾರದ ಮೇಲೆ ಶಾಸಕ ವಿನಯ್ ಕುಲಕರ್ಣಿ ಅವರನ್ನು ಎ1 ಆರೋಪಿ ಮತ್ತು ಅವರ ಆಪ್ತ ಸಹಾಯಕ ಅರ್ಜುನ್ ಅವರನ್ನು ಎ2 ಆರೋಪಿ ಎಂದು ಪೊಲೀಸರು ಎಫ್ಐಆರ್ನಲ್ಲಿ ನಮೂದಿಸಿದ್ದಾರೆ.
ಸಂತ್ರಸ್ಥ ಮಹಿಳೆಯೂ ದೂರಿನಲ್ಲಿ 2022ರಲ್ಲಿ ನಾನು ಶಾಸಕರನ್ನು ಭೇಟಿ ಮಾಡಿದ್ದೆ. ಆ ವೇಳೆ ಶಾಸಕರು ನನ್ನ ಫೋನ್ ನಂಬರ್ ಅನ್ನು ಒಬ್ಬ ರೈತರಿಣದ ಪಡೆದಿದ್ದರು. ಬಳಿಕ ನನಗೆ ಶಾಸಕರು ರಾತ್ರಿ ಸಮಯದಲ್ಲಿ ಕರೆ ಮಾಡಲು ಆರಂಭಿಸಿದರು. ಹೀಗೆ ನಡೆಯುತ್ತಿರುವಾಗ ಕೆಲವು ತಿಂಗಳ ಆದಮೇಲೆ ಬೆತ್ತಲೆಯಾಗಿ ವೀಡಿಯೋ ಕರೆ ಮಾಡುವಂತೆ ಹೇಳುತ್ತಿದ್ದರು. ಅಲ್ಲದೇ, ಹೆಬ್ಬಾಳದಲ್ಲಿರುವ ತಮ್ಮ ಮನೆಗೆ ಬರುವಂತೆ ಒತ್ತಾಯಿಸಿದ್ದರು. ನಾನು ಇದನ್ನು ನಿರಾಕರಿಸಿದಕ್ಕೆ ಕೆಲ ರೌಡಿಗಳ ತಂಡವೊಂದು ಶಾಸಕರ ಮನೆಗೆ ಹೋಗದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತೆ ಎಂದು ಬೆದರಿಕೆ ಹಾಕಿದ್ದರು.
ಇದಾದಮೇಲೆ ಏಪ್ರಿಲ್ನಲ್ಲಿ ಶಾಸಕರು ನನ್ನನ್ನು ಬೆಳಗಾವಿಗೆ ಬರುವಂತೆ ಹೇಳಿದರು. ನಾನು ಅಲ್ಲಿಗೆ ಹೋದಾಗ ನನಗೆ ಮುಜುಗರವಾಗುವಂತೆ ಮಾಡಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ಶಾಸಕರನ್ನು ಭೇಟಿಯಾಗಲು ಬಂದಾಗ ನಾನು ಅವರಿಂದ ತಪ್ಪಿಸಿಕೊಂಡು ಬಂದೆನು. ಆಗಸ್ಟ್ 24 ರಂದು ಒಂದು ಕೆಲಸದ ಅನಿವಾರ್ಯವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಗಾಗಿ ಬೆಂಗಳೂರಿಗೆ ಬಂದಿದ್ದೆ. ಆ ವೇಳೆ ಶಾಸಕರು ನನಗೆ ಕರೆ ಮಾಡಿ ಹೆಬ್ಬಾಳದ ಮನೆಗೆ ಬರುವಂತೆ ಆದೇಶಿಸಿದ್ದರು. ಆಗ ನಾನು ಅಲ್ಲಿಗೆ ಹೋಗುವ ಸನ್ನಿವೇಶ ಎದುರಾಯಿತು. ಶಾಸಕರು ಆ ಸಂದರ್ಭದಲ್ಲಿ ಕಾರಿನಲ್ಲಿ ಒಬ್ಬರೇ ಬಂದು ವಿಮಾನ ನಿಲ್ದಾಣದ ಹತ್ತಿರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನನ್ನ ಮೇಲೆ ಕಾರಿನಲ್ಲಿಯೇ ಅತ್ಯಾಚಾರ ನಡೆಸಿ, ರಾಜಕೀಯದಲ್ಲಿ ದೊಡ್ಡಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡುತ್ತೇನೆ ಎಂದು ಆಮಿಷವೊಡ್ಡಿದರು ಎಂದು ದಾಖಲಿಸಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…