ರಾಜ್ಯ

ಅತ್ಯಾಚಾರ ಆರೋಪ: ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ದೂರು ದಾಖಲು

ಬೆಂಗಳೂರು: ಸಂತ್ರಸ್ಥ ಮಹಿಳೆ ದೂರಿನ ಆಧಾರದ ಮೇಲೆ ಧಾರವಾಡದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ(ಅಕ್ಟೋಬರ್‌ 8) ಎಫ್‌ಐಆರ್‌ ದಾಖಲಿಸಲಾಗಿದೆ.

ಸಂತ್ರಸ್ಥ ಮಹಿಳೆಯು ತನ್ನ ಮೇಲೆ ಅತ್ಯಾಚಾರ ಎಸಗಿ ಕಿರುಕುಳ ನೀಡಿದ್ದಾರೆಂದು ದೂರು ದಾಖಲಿಸಿದ್ದರು. ಬಳಿಕ ಈ ದೂರಿನ ಆಧಾರದ ಮೇಲೆ ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಎ1 ಆರೋಪಿ ಮತ್ತು ಅವರ ಆಪ್ತ ಸಹಾಯಕ ಅರ್ಜುನ್‌ ಅವರನ್ನು ಎ2 ಆರೋಪಿ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ನಮೂದಿಸಿದ್ದಾರೆ.

ಸಂತ್ರಸ್ಥ ಮಹಿಳೆಯೂ ದೂರಿನಲ್ಲಿ 2022ರಲ್ಲಿ ನಾನು ಶಾಸಕರನ್ನು ಭೇಟಿ ಮಾಡಿದ್ದೆ. ಆ ವೇಳೆ ಶಾಸಕರು ನನ್ನ ಫೋನ್‌ ನಂಬರ್‌ ಅನ್ನು ಒಬ್ಬ ರೈತರಿಣದ ಪಡೆದಿದ್ದರು. ಬಳಿಕ ನನಗೆ ಶಾಸಕರು ರಾತ್ರಿ ಸಮಯದಲ್ಲಿ ಕರೆ ಮಾಡಲು ಆರಂಭಿಸಿದರು. ಹೀಗೆ ನಡೆಯುತ್ತಿರುವಾಗ ಕೆಲವು ತಿಂಗಳ ಆದಮೇಲೆ ಬೆತ್ತಲೆಯಾಗಿ ವೀಡಿಯೋ ಕರೆ ಮಾಡುವಂತೆ ಹೇಳುತ್ತಿದ್ದರು. ಅಲ್ಲದೇ, ಹೆಬ್ಬಾಳದಲ್ಲಿರುವ ತಮ್ಮ ಮನೆಗೆ ಬರುವಂತೆ ಒತ್ತಾಯಿಸಿದ್ದರು. ನಾನು ಇದನ್ನು ನಿರಾಕರಿಸಿದಕ್ಕೆ ಕೆಲ ರೌಡಿಗಳ ತಂಡವೊಂದು ಶಾಸಕರ ಮನೆಗೆ ಹೋಗದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತೆ ಎಂದು ಬೆದರಿಕೆ ಹಾಕಿದ್ದರು.

ಇದಾದಮೇಲೆ ಏಪ್ರಿಲ್‌ನಲ್ಲಿ ಶಾಸಕರು ನನ್ನನ್ನು ಬೆಳಗಾವಿಗೆ ಬರುವಂತೆ ಹೇಳಿದರು. ನಾನು ಅಲ್ಲಿಗೆ ಹೋದಾಗ ನನಗೆ ಮುಜುಗರವಾಗುವಂತೆ ಮಾಡಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ಶಾಸಕರನ್ನು ಭೇಟಿಯಾಗಲು ಬಂದಾಗ ನಾನು ಅವರಿಂದ ತಪ್ಪಿಸಿಕೊಂಡು ಬಂದೆನು. ಆಗಸ್ಟ್‌ 24 ರಂದು ಒಂದು ಕೆಲಸದ ಅನಿವಾರ್ಯವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಗಾಗಿ ಬೆಂಗಳೂರಿಗೆ ಬಂದಿದ್ದೆ. ಆ ವೇಳೆ ಶಾಸಕರು ನನಗೆ ಕರೆ ಮಾಡಿ ಹೆಬ್ಬಾಳದ ಮನೆಗೆ ಬರುವಂತೆ ಆದೇಶಿಸಿದ್ದರು. ಆಗ ನಾನು ಅಲ್ಲಿಗೆ ಹೋಗುವ ಸನ್ನಿವೇಶ ಎದುರಾಯಿತು. ಶಾಸಕರು ಆ ಸಂದರ್ಭದಲ್ಲಿ ಕಾರಿನಲ್ಲಿ ಒಬ್ಬರೇ ಬಂದು ವಿಮಾನ ನಿಲ್ದಾಣದ ಹತ್ತಿರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನನ್ನ ಮೇಲೆ ಕಾರಿನಲ್ಲಿಯೇ ಅತ್ಯಾಚಾರ ನಡೆಸಿ, ರಾಜಕೀಯದಲ್ಲಿ ದೊಡ್ಡಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡುತ್ತೇನೆ ಎಂದು ಆಮಿಷವೊಡ್ಡಿದರು ಎಂದು ದಾಖಲಿಸಿದ್ದಾರೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago