ರಾಜ್ಯ

ಅತ್ಯಾಚಾರ ಆರೋಪ: ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ದೂರು ದಾಖಲು

ಬೆಂಗಳೂರು: ಸಂತ್ರಸ್ಥ ಮಹಿಳೆ ದೂರಿನ ಆಧಾರದ ಮೇಲೆ ಧಾರವಾಡದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ(ಅಕ್ಟೋಬರ್‌ 8) ಎಫ್‌ಐಆರ್‌ ದಾಖಲಿಸಲಾಗಿದೆ.

ಸಂತ್ರಸ್ಥ ಮಹಿಳೆಯು ತನ್ನ ಮೇಲೆ ಅತ್ಯಾಚಾರ ಎಸಗಿ ಕಿರುಕುಳ ನೀಡಿದ್ದಾರೆಂದು ದೂರು ದಾಖಲಿಸಿದ್ದರು. ಬಳಿಕ ಈ ದೂರಿನ ಆಧಾರದ ಮೇಲೆ ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಎ1 ಆರೋಪಿ ಮತ್ತು ಅವರ ಆಪ್ತ ಸಹಾಯಕ ಅರ್ಜುನ್‌ ಅವರನ್ನು ಎ2 ಆರೋಪಿ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ನಮೂದಿಸಿದ್ದಾರೆ.

ಸಂತ್ರಸ್ಥ ಮಹಿಳೆಯೂ ದೂರಿನಲ್ಲಿ 2022ರಲ್ಲಿ ನಾನು ಶಾಸಕರನ್ನು ಭೇಟಿ ಮಾಡಿದ್ದೆ. ಆ ವೇಳೆ ಶಾಸಕರು ನನ್ನ ಫೋನ್‌ ನಂಬರ್‌ ಅನ್ನು ಒಬ್ಬ ರೈತರಿಣದ ಪಡೆದಿದ್ದರು. ಬಳಿಕ ನನಗೆ ಶಾಸಕರು ರಾತ್ರಿ ಸಮಯದಲ್ಲಿ ಕರೆ ಮಾಡಲು ಆರಂಭಿಸಿದರು. ಹೀಗೆ ನಡೆಯುತ್ತಿರುವಾಗ ಕೆಲವು ತಿಂಗಳ ಆದಮೇಲೆ ಬೆತ್ತಲೆಯಾಗಿ ವೀಡಿಯೋ ಕರೆ ಮಾಡುವಂತೆ ಹೇಳುತ್ತಿದ್ದರು. ಅಲ್ಲದೇ, ಹೆಬ್ಬಾಳದಲ್ಲಿರುವ ತಮ್ಮ ಮನೆಗೆ ಬರುವಂತೆ ಒತ್ತಾಯಿಸಿದ್ದರು. ನಾನು ಇದನ್ನು ನಿರಾಕರಿಸಿದಕ್ಕೆ ಕೆಲ ರೌಡಿಗಳ ತಂಡವೊಂದು ಶಾಸಕರ ಮನೆಗೆ ಹೋಗದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತೆ ಎಂದು ಬೆದರಿಕೆ ಹಾಕಿದ್ದರು.

ಇದಾದಮೇಲೆ ಏಪ್ರಿಲ್‌ನಲ್ಲಿ ಶಾಸಕರು ನನ್ನನ್ನು ಬೆಳಗಾವಿಗೆ ಬರುವಂತೆ ಹೇಳಿದರು. ನಾನು ಅಲ್ಲಿಗೆ ಹೋದಾಗ ನನಗೆ ಮುಜುಗರವಾಗುವಂತೆ ಮಾಡಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ಶಾಸಕರನ್ನು ಭೇಟಿಯಾಗಲು ಬಂದಾಗ ನಾನು ಅವರಿಂದ ತಪ್ಪಿಸಿಕೊಂಡು ಬಂದೆನು. ಆಗಸ್ಟ್‌ 24 ರಂದು ಒಂದು ಕೆಲಸದ ಅನಿವಾರ್ಯವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಗಾಗಿ ಬೆಂಗಳೂರಿಗೆ ಬಂದಿದ್ದೆ. ಆ ವೇಳೆ ಶಾಸಕರು ನನಗೆ ಕರೆ ಮಾಡಿ ಹೆಬ್ಬಾಳದ ಮನೆಗೆ ಬರುವಂತೆ ಆದೇಶಿಸಿದ್ದರು. ಆಗ ನಾನು ಅಲ್ಲಿಗೆ ಹೋಗುವ ಸನ್ನಿವೇಶ ಎದುರಾಯಿತು. ಶಾಸಕರು ಆ ಸಂದರ್ಭದಲ್ಲಿ ಕಾರಿನಲ್ಲಿ ಒಬ್ಬರೇ ಬಂದು ವಿಮಾನ ನಿಲ್ದಾಣದ ಹತ್ತಿರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನನ್ನ ಮೇಲೆ ಕಾರಿನಲ್ಲಿಯೇ ಅತ್ಯಾಚಾರ ನಡೆಸಿ, ರಾಜಕೀಯದಲ್ಲಿ ದೊಡ್ಡಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡುತ್ತೇನೆ ಎಂದು ಆಮಿಷವೊಡ್ಡಿದರು ಎಂದು ದಾಖಲಿಸಿದ್ದಾರೆ.

andolana

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

54 mins ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

56 mins ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

59 mins ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

1 hour ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

1 hour ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

1 hour ago