ರಾಜ್ಯ

ಅತ್ಯಾಚಾರ ಆರೋಪ: ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ದೂರು ದಾಖಲು

ಬೆಂಗಳೂರು: ಸಂತ್ರಸ್ಥ ಮಹಿಳೆ ದೂರಿನ ಆಧಾರದ ಮೇಲೆ ಧಾರವಾಡದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ(ಅಕ್ಟೋಬರ್‌ 8) ಎಫ್‌ಐಆರ್‌ ದಾಖಲಿಸಲಾಗಿದೆ.

ಸಂತ್ರಸ್ಥ ಮಹಿಳೆಯು ತನ್ನ ಮೇಲೆ ಅತ್ಯಾಚಾರ ಎಸಗಿ ಕಿರುಕುಳ ನೀಡಿದ್ದಾರೆಂದು ದೂರು ದಾಖಲಿಸಿದ್ದರು. ಬಳಿಕ ಈ ದೂರಿನ ಆಧಾರದ ಮೇಲೆ ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಎ1 ಆರೋಪಿ ಮತ್ತು ಅವರ ಆಪ್ತ ಸಹಾಯಕ ಅರ್ಜುನ್‌ ಅವರನ್ನು ಎ2 ಆರೋಪಿ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ನಮೂದಿಸಿದ್ದಾರೆ.

ಸಂತ್ರಸ್ಥ ಮಹಿಳೆಯೂ ದೂರಿನಲ್ಲಿ 2022ರಲ್ಲಿ ನಾನು ಶಾಸಕರನ್ನು ಭೇಟಿ ಮಾಡಿದ್ದೆ. ಆ ವೇಳೆ ಶಾಸಕರು ನನ್ನ ಫೋನ್‌ ನಂಬರ್‌ ಅನ್ನು ಒಬ್ಬ ರೈತರಿಣದ ಪಡೆದಿದ್ದರು. ಬಳಿಕ ನನಗೆ ಶಾಸಕರು ರಾತ್ರಿ ಸಮಯದಲ್ಲಿ ಕರೆ ಮಾಡಲು ಆರಂಭಿಸಿದರು. ಹೀಗೆ ನಡೆಯುತ್ತಿರುವಾಗ ಕೆಲವು ತಿಂಗಳ ಆದಮೇಲೆ ಬೆತ್ತಲೆಯಾಗಿ ವೀಡಿಯೋ ಕರೆ ಮಾಡುವಂತೆ ಹೇಳುತ್ತಿದ್ದರು. ಅಲ್ಲದೇ, ಹೆಬ್ಬಾಳದಲ್ಲಿರುವ ತಮ್ಮ ಮನೆಗೆ ಬರುವಂತೆ ಒತ್ತಾಯಿಸಿದ್ದರು. ನಾನು ಇದನ್ನು ನಿರಾಕರಿಸಿದಕ್ಕೆ ಕೆಲ ರೌಡಿಗಳ ತಂಡವೊಂದು ಶಾಸಕರ ಮನೆಗೆ ಹೋಗದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತೆ ಎಂದು ಬೆದರಿಕೆ ಹಾಕಿದ್ದರು.

ಇದಾದಮೇಲೆ ಏಪ್ರಿಲ್‌ನಲ್ಲಿ ಶಾಸಕರು ನನ್ನನ್ನು ಬೆಳಗಾವಿಗೆ ಬರುವಂತೆ ಹೇಳಿದರು. ನಾನು ಅಲ್ಲಿಗೆ ಹೋದಾಗ ನನಗೆ ಮುಜುಗರವಾಗುವಂತೆ ಮಾಡಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ಶಾಸಕರನ್ನು ಭೇಟಿಯಾಗಲು ಬಂದಾಗ ನಾನು ಅವರಿಂದ ತಪ್ಪಿಸಿಕೊಂಡು ಬಂದೆನು. ಆಗಸ್ಟ್‌ 24 ರಂದು ಒಂದು ಕೆಲಸದ ಅನಿವಾರ್ಯವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಗಾಗಿ ಬೆಂಗಳೂರಿಗೆ ಬಂದಿದ್ದೆ. ಆ ವೇಳೆ ಶಾಸಕರು ನನಗೆ ಕರೆ ಮಾಡಿ ಹೆಬ್ಬಾಳದ ಮನೆಗೆ ಬರುವಂತೆ ಆದೇಶಿಸಿದ್ದರು. ಆಗ ನಾನು ಅಲ್ಲಿಗೆ ಹೋಗುವ ಸನ್ನಿವೇಶ ಎದುರಾಯಿತು. ಶಾಸಕರು ಆ ಸಂದರ್ಭದಲ್ಲಿ ಕಾರಿನಲ್ಲಿ ಒಬ್ಬರೇ ಬಂದು ವಿಮಾನ ನಿಲ್ದಾಣದ ಹತ್ತಿರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನನ್ನ ಮೇಲೆ ಕಾರಿನಲ್ಲಿಯೇ ಅತ್ಯಾಚಾರ ನಡೆಸಿ, ರಾಜಕೀಯದಲ್ಲಿ ದೊಡ್ಡಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡುತ್ತೇನೆ ಎಂದು ಆಮಿಷವೊಡ್ಡಿದರು ಎಂದು ದಾಖಲಿಸಿದ್ದಾರೆ.

andolana

Recent Posts

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

29 mins ago

ಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ…

33 mins ago

ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಪ್ರಕರಣ: ತಂಗಿ ಅಂತ್ಯಸಂಸ್ಕಾರ ಆಗುತ್ತಿದ್ದಂತೆ ಅಣ್ಣ ಸಾವು

ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ…

1 hour ago

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…

2 hours ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…

2 hours ago

ಓದುಗರ ಪತ್ರ:   ಜನೌಷಧ ಕೇಂದ್ರ: ಸುಪ್ರೀಂ ತೀರ್ಮಾನ ಸ್ವಾಗತಾರ್ಹ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…

2 hours ago