ರಾಜ್ಯ

ಅತ್ಯಾಚಾರ ಆರೋಪ: ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ದೂರು ದಾಖಲು

ಬೆಂಗಳೂರು: ಸಂತ್ರಸ್ಥ ಮಹಿಳೆ ದೂರಿನ ಆಧಾರದ ಮೇಲೆ ಧಾರವಾಡದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ(ಅಕ್ಟೋಬರ್‌ 8) ಎಫ್‌ಐಆರ್‌ ದಾಖಲಿಸಲಾಗಿದೆ.

ಸಂತ್ರಸ್ಥ ಮಹಿಳೆಯು ತನ್ನ ಮೇಲೆ ಅತ್ಯಾಚಾರ ಎಸಗಿ ಕಿರುಕುಳ ನೀಡಿದ್ದಾರೆಂದು ದೂರು ದಾಖಲಿಸಿದ್ದರು. ಬಳಿಕ ಈ ದೂರಿನ ಆಧಾರದ ಮೇಲೆ ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಎ1 ಆರೋಪಿ ಮತ್ತು ಅವರ ಆಪ್ತ ಸಹಾಯಕ ಅರ್ಜುನ್‌ ಅವರನ್ನು ಎ2 ಆರೋಪಿ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ನಮೂದಿಸಿದ್ದಾರೆ.

ಸಂತ್ರಸ್ಥ ಮಹಿಳೆಯೂ ದೂರಿನಲ್ಲಿ 2022ರಲ್ಲಿ ನಾನು ಶಾಸಕರನ್ನು ಭೇಟಿ ಮಾಡಿದ್ದೆ. ಆ ವೇಳೆ ಶಾಸಕರು ನನ್ನ ಫೋನ್‌ ನಂಬರ್‌ ಅನ್ನು ಒಬ್ಬ ರೈತರಿಣದ ಪಡೆದಿದ್ದರು. ಬಳಿಕ ನನಗೆ ಶಾಸಕರು ರಾತ್ರಿ ಸಮಯದಲ್ಲಿ ಕರೆ ಮಾಡಲು ಆರಂಭಿಸಿದರು. ಹೀಗೆ ನಡೆಯುತ್ತಿರುವಾಗ ಕೆಲವು ತಿಂಗಳ ಆದಮೇಲೆ ಬೆತ್ತಲೆಯಾಗಿ ವೀಡಿಯೋ ಕರೆ ಮಾಡುವಂತೆ ಹೇಳುತ್ತಿದ್ದರು. ಅಲ್ಲದೇ, ಹೆಬ್ಬಾಳದಲ್ಲಿರುವ ತಮ್ಮ ಮನೆಗೆ ಬರುವಂತೆ ಒತ್ತಾಯಿಸಿದ್ದರು. ನಾನು ಇದನ್ನು ನಿರಾಕರಿಸಿದಕ್ಕೆ ಕೆಲ ರೌಡಿಗಳ ತಂಡವೊಂದು ಶಾಸಕರ ಮನೆಗೆ ಹೋಗದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತೆ ಎಂದು ಬೆದರಿಕೆ ಹಾಕಿದ್ದರು.

ಇದಾದಮೇಲೆ ಏಪ್ರಿಲ್‌ನಲ್ಲಿ ಶಾಸಕರು ನನ್ನನ್ನು ಬೆಳಗಾವಿಗೆ ಬರುವಂತೆ ಹೇಳಿದರು. ನಾನು ಅಲ್ಲಿಗೆ ಹೋದಾಗ ನನಗೆ ಮುಜುಗರವಾಗುವಂತೆ ಮಾಡಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ಶಾಸಕರನ್ನು ಭೇಟಿಯಾಗಲು ಬಂದಾಗ ನಾನು ಅವರಿಂದ ತಪ್ಪಿಸಿಕೊಂಡು ಬಂದೆನು. ಆಗಸ್ಟ್‌ 24 ರಂದು ಒಂದು ಕೆಲಸದ ಅನಿವಾರ್ಯವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಗಾಗಿ ಬೆಂಗಳೂರಿಗೆ ಬಂದಿದ್ದೆ. ಆ ವೇಳೆ ಶಾಸಕರು ನನಗೆ ಕರೆ ಮಾಡಿ ಹೆಬ್ಬಾಳದ ಮನೆಗೆ ಬರುವಂತೆ ಆದೇಶಿಸಿದ್ದರು. ಆಗ ನಾನು ಅಲ್ಲಿಗೆ ಹೋಗುವ ಸನ್ನಿವೇಶ ಎದುರಾಯಿತು. ಶಾಸಕರು ಆ ಸಂದರ್ಭದಲ್ಲಿ ಕಾರಿನಲ್ಲಿ ಒಬ್ಬರೇ ಬಂದು ವಿಮಾನ ನಿಲ್ದಾಣದ ಹತ್ತಿರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನನ್ನ ಮೇಲೆ ಕಾರಿನಲ್ಲಿಯೇ ಅತ್ಯಾಚಾರ ನಡೆಸಿ, ರಾಜಕೀಯದಲ್ಲಿ ದೊಡ್ಡಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡುತ್ತೇನೆ ಎಂದು ಆಮಿಷವೊಡ್ಡಿದರು ಎಂದು ದಾಖಲಿಸಿದ್ದಾರೆ.

andolana

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago