ರಾಜ್ಯ

ಅತ್ಯಾಚಾರ ಆರೋಪ: ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ದೂರು ದಾಖಲು

ಬೆಂಗಳೂರು: ಸಂತ್ರಸ್ಥ ಮಹಿಳೆ ದೂರಿನ ಆಧಾರದ ಮೇಲೆ ಧಾರವಾಡದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ(ಅಕ್ಟೋಬರ್‌ 8) ಎಫ್‌ಐಆರ್‌ ದಾಖಲಿಸಲಾಗಿದೆ.

ಸಂತ್ರಸ್ಥ ಮಹಿಳೆಯು ತನ್ನ ಮೇಲೆ ಅತ್ಯಾಚಾರ ಎಸಗಿ ಕಿರುಕುಳ ನೀಡಿದ್ದಾರೆಂದು ದೂರು ದಾಖಲಿಸಿದ್ದರು. ಬಳಿಕ ಈ ದೂರಿನ ಆಧಾರದ ಮೇಲೆ ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಎ1 ಆರೋಪಿ ಮತ್ತು ಅವರ ಆಪ್ತ ಸಹಾಯಕ ಅರ್ಜುನ್‌ ಅವರನ್ನು ಎ2 ಆರೋಪಿ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ನಮೂದಿಸಿದ್ದಾರೆ.

ಸಂತ್ರಸ್ಥ ಮಹಿಳೆಯೂ ದೂರಿನಲ್ಲಿ 2022ರಲ್ಲಿ ನಾನು ಶಾಸಕರನ್ನು ಭೇಟಿ ಮಾಡಿದ್ದೆ. ಆ ವೇಳೆ ಶಾಸಕರು ನನ್ನ ಫೋನ್‌ ನಂಬರ್‌ ಅನ್ನು ಒಬ್ಬ ರೈತರಿಣದ ಪಡೆದಿದ್ದರು. ಬಳಿಕ ನನಗೆ ಶಾಸಕರು ರಾತ್ರಿ ಸಮಯದಲ್ಲಿ ಕರೆ ಮಾಡಲು ಆರಂಭಿಸಿದರು. ಹೀಗೆ ನಡೆಯುತ್ತಿರುವಾಗ ಕೆಲವು ತಿಂಗಳ ಆದಮೇಲೆ ಬೆತ್ತಲೆಯಾಗಿ ವೀಡಿಯೋ ಕರೆ ಮಾಡುವಂತೆ ಹೇಳುತ್ತಿದ್ದರು. ಅಲ್ಲದೇ, ಹೆಬ್ಬಾಳದಲ್ಲಿರುವ ತಮ್ಮ ಮನೆಗೆ ಬರುವಂತೆ ಒತ್ತಾಯಿಸಿದ್ದರು. ನಾನು ಇದನ್ನು ನಿರಾಕರಿಸಿದಕ್ಕೆ ಕೆಲ ರೌಡಿಗಳ ತಂಡವೊಂದು ಶಾಸಕರ ಮನೆಗೆ ಹೋಗದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತೆ ಎಂದು ಬೆದರಿಕೆ ಹಾಕಿದ್ದರು.

ಇದಾದಮೇಲೆ ಏಪ್ರಿಲ್‌ನಲ್ಲಿ ಶಾಸಕರು ನನ್ನನ್ನು ಬೆಳಗಾವಿಗೆ ಬರುವಂತೆ ಹೇಳಿದರು. ನಾನು ಅಲ್ಲಿಗೆ ಹೋದಾಗ ನನಗೆ ಮುಜುಗರವಾಗುವಂತೆ ಮಾಡಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ಶಾಸಕರನ್ನು ಭೇಟಿಯಾಗಲು ಬಂದಾಗ ನಾನು ಅವರಿಂದ ತಪ್ಪಿಸಿಕೊಂಡು ಬಂದೆನು. ಆಗಸ್ಟ್‌ 24 ರಂದು ಒಂದು ಕೆಲಸದ ಅನಿವಾರ್ಯವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಗಾಗಿ ಬೆಂಗಳೂರಿಗೆ ಬಂದಿದ್ದೆ. ಆ ವೇಳೆ ಶಾಸಕರು ನನಗೆ ಕರೆ ಮಾಡಿ ಹೆಬ್ಬಾಳದ ಮನೆಗೆ ಬರುವಂತೆ ಆದೇಶಿಸಿದ್ದರು. ಆಗ ನಾನು ಅಲ್ಲಿಗೆ ಹೋಗುವ ಸನ್ನಿವೇಶ ಎದುರಾಯಿತು. ಶಾಸಕರು ಆ ಸಂದರ್ಭದಲ್ಲಿ ಕಾರಿನಲ್ಲಿ ಒಬ್ಬರೇ ಬಂದು ವಿಮಾನ ನಿಲ್ದಾಣದ ಹತ್ತಿರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನನ್ನ ಮೇಲೆ ಕಾರಿನಲ್ಲಿಯೇ ಅತ್ಯಾಚಾರ ನಡೆಸಿ, ರಾಜಕೀಯದಲ್ಲಿ ದೊಡ್ಡಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡುತ್ತೇನೆ ಎಂದು ಆಮಿಷವೊಡ್ಡಿದರು ಎಂದು ದಾಖಲಿಸಿದ್ದಾರೆ.

andolana

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

5 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

13 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

23 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago