ರಾಜ್ಯ

ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ದ ಹೈಕಮಾಂಡ್‌ಗೆ ದೂರು ; ರೇಣುಕಾಚಾರ್ಯ

ಬೆಂಗಳೂರು: ಬಸವನಗೌಡ ಪಾಟೀಲ್ ಯತ್ನಾಳ ಹಾಗೂ ರಮೇಶ್ ಜಾರಕಿಹೊಳಿ‌ ವಿರುದ್ದ ಶೀಘ್ರದಲ್ಲೇ ಹೈಕಮಾಂಡ್ ಗೆ ದೂರು ನೀಡುವುದಾಗಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.

ಭಾನುವಾರ  ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನು ಈ ಹಿಂದೆ ಪಕ್ಷ ಉಚ್ಚಾಟನೆ‌ ಮಾಡಿತ್ತು ಆಗ ಯಡಿಯೂರಪ್ಪ ಅವರ ಕಾಲಿಗೆ ಬಿದ್ದಿ ಬಿಜೆಪಿಗೆ ಬಂದಿದ್ದೀರಿ. ನಿಮಗೆ ಯಡಿಯೂರಪ್ಪ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ? ಅಂತ ಪ್ರಶ್ನೆ ಮಾಡಿದ್ದಾರೆ.

ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿ, ಸೈಕಲ್, ಸ್ಕೂಟರ್, ಬಸ್, ಕಾರಲ್ಲಿ ಓಡಾಡಿ ಪಕ್ಷ ಕಟ್ಟಿದ್ದಾರೆ ಯಡಿಯೂರಪ್ಪ ಪಕ್ಷ ಕಟ್ತಿದ್ದಾಗ ಯತ್ನಾಳದ ಕಣ್ ಬಿಟ್ಟಿರಲಿಲ್ಲ ಎಚ್ಚರಿಕೆಯಿಂದ ಯತ್ನಾಳ್ ಮಾತನಾಡಬೇಕು. ಹೀಗೆಲ್ಲ ಮಾತಾಡೋದನ್ನ ಇನ್ನು‌ಮುಂದೆ ಸಹಿಸಲು ಸಾದ್ಯವಿಲ್ಲ ಎಂದು ಹೇಳಿದ್ದಾರೆ.

ವಿಜಯೇಂದ್ರ ಅವರನ್ನ ಅಧ್ಯಕ್ಷ ಮಾಡಿದ್ದು ಹೈಕಮಾಂಡ್ ವಿಜಯೇಂದ್ರ ಅವರಿಗೆ ಬೈದರೆ ಹೈಕಮಾಂಡ್ ಗೆ ಬೈದಂತೆ. ನೀವು ಏನೇ ಮಾಡಿದ್ರೂ ವಿಜಯೇಂದ್ರ ವರ್ಚಸ್ಸು ಕುಗ್ಗಲ್ಲ. ನಿಮಗೆ ಯಡಿಯೂರಪ್ಪ ಬಗ್ಗೆ ಮಾತಾಡೋಕ್ಕೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ಯತ್ನಾಳ್ ಒಬ್ಬ ಗೋಮುಖ ವ್ಯಾಘ್ರ?
ಯತ್ನಾಳ್ ಕಾಂಗ್ರೆಸ್ ಏಜೆಂಟ್ ನಂತೆ ವರ್ತನೆ ಮಾಡ್ತಿದ್ದಾರೆ, ರಾಜ್ಯದ ಕೆಲವರು ಮಗು ಚಿವುಟಿ ತೊಟ್ಟಿಲು ತೂಗ್ತಿದ್ದಾರೆ ಇಲ್ಲಿ ಯತ್ನಾಳ್ ನ ಎತ್ತಿ ಕಟ್ತಿದ್ದಾರೆ ಕೆಲವರು ವಿಜಯೇಂದ್ರರ ವರ್ಚಸ್ಸು ಕುಗ್ಗಿಸಬಹುದು ಅಂತ ಅಂದುಕೊಂಡಿದ್ದಾರೆ. ಬಹಳ ಗೌರವ ಕೊಟ್ಟು ಇದುವರೆಗೂ ನಿನ್ನ ಬಗ್ಗೆ ಇದುವರೆಗೆ‌‌ ಮಾತಾಡಿದ್ದೇವೆ, ಇನ್ಮುಂದೆ ಸಹಿಸಲ್ಲ ಮುಂದಿನ ಶನಿವಾರ ನಾವು ಸಭೆ ಸೇರುತ್ತೇವೆ ಹೈಕಮಾಂಡ್ ಬಳಿಗೆ ಹೋಗಿ ದೂರು ಕೊಡುತ್ತೇವೆ .

ಯತ್ನಾಳ್ ದು ಹರಕು ಬಾಯಿ

ಯಡಿಯೂರಪ್ಪ ವಿರುದ್ಧ ಸಂಚು ಮಾಡಿದಾಗಲೆಲ್ಲ ಬಿಜೆಪಿಗೆ ಕಮ್ಮಿ ಸ್ಥಾನ ಬಂದಿದೆ ಎಂದು ಅನಗತ್ಯ ಟೀಕೆ ಮಾಡ್ತಿದ್ದೀರಿ, ಇದನ್ನ ಸಹಿಸಲ್ಲ ಈ ಮನುಷ್ಯನಿಗೆ ಮೂರು ಮುಖವಾಡ ಇದೆ. ಉತ್ತರ ಕರ್ನಾಟಕದ ಹುಲಿ ಅಂತಾರೆ, ಉ.ಕಕ್ಕೆ ಎಷ್ಟು ಅನುದಾನ ಕೊಂಡೊಯ್ದಿರಿ?

ಹಿಂದೂ ಹುಲಿ ಆದೋರು ಟಿಪ್ಪು ಟೋಪಿ ಹಾಕಿ, ಖಡ್ಗ ಹಿಡಿದು ಅವರ ಜತೆ ಊಟ ಮಾಡಿದ್ರಿ, ಎಲ್ಲಿ ಹೋಗಿತ್ತು ಆಗ ಹಿಂದೂ ಹುಲಿ?,  ಪಂಚಮಸಾಲಿ ಹೋರಾಟದಲ್ಲಿ ಯತ್ನಾಳ್ ದು ದ್ವಂದ್ವ ನಿಲುವಿನ‌ ಮುಖವಾಡ. ಎಲ್ರೂ 2ಎ ಗಾಗಿ ಹೋರಾಟ ಮಾಡಿದ್ರೆ, ನಮಗೆ 2ಎ ಮೀಸಲಾತಿ ಬೇಡ ಅಂತಾರೆ . ತಮ್ಮ ಸ್ವಾರ್ಥಕ್ಕೆ ಯತ್ನಾಳ್ ಮೂರು ಮುಖವಾಡ ಹಾಕಿದ್ದಾರೆ, ಈಗ ಅವರ ಮುಖವಾಡ ಕಳಚಿದೆ. ನಿಮ್ಮ ಬೆಂಬಲಕ್ಕೆ ಸಂಸದರು ಇದ್ದಾರೆ ಅಂದ್ರಲ್ಲ, ತಾಕತ್ ಇದ್ರೆ ಅವರ ಹೆಸರು ಹೇಳಿ..

ಯತ್ನಾಳ್ ಗೆ ರೇಣುಕಾಚಾರ್ಯ ಸವಾಲ್

ವಿಜಯೇಂದ್ರ ಬಚ್ಚಾ ಅಲ್ಲ, ಸಮರ್ಥ, ನುರಿತ ರಾಜಕಾರಣಿ. ವಿಜಯೇಂದ್ರ ಗೆ ಜ್ಞಾನ ಇದೆ, ಪಕ್ಷ ಅಧಿಕಾರಕ್ಕೆ ತರುವ ಛಲ ಇದೆ. ಯತ್ನಾಳ್ ಮತ್ತು ತಂಡ ಮುಖವಾಡದಲ್ಲಿ ಸ್ವಾರ್ಥ ರಾಜಕಾರಣ ಮಾಡ್ತಿದ್ದಾರೆ. ಇದನ್ನು ಸಹಿಸಲ್ಲ, ಏನೇ ಇದ್ರೂ ನಾಲ್ಕು ಗೋಡೆ ಮಧ್ಯೆ ಮಾತನಾಡಬೇಕು. ಯತ್ನಾಳ್, ರಮೇಶ್ ಜಾರಕಿಹೊಳಿ ಮಾತುಗಳಿಂದ ಕಾರ್ಯಕರ್ತರ ಮನಸಿಗೆ ನೋವಾಗಿದೆ. ಕೆಲವರು ಅವರನ್ನು ಬೆಂಬಲಿಸ್ತಿದ್ದಾರೆ. ಆಕಾಶಕ್ಕೆ ಉಗುಳಿದರೆ, ಅದು ಉಗುಳಿದವರ ಮೇಲೆಯೇ ಬೀಳುತ್ತೆ. ವಿಜಯೇಂದ್ರ ಮುಂದುವರೀತಾರೆ, ಅವರ ನೇತೃತ್ವದಲ್ಲಿ ಪಕ್ಷ ಕಟ್ತೇವೆ, ಮತ್ತೆ ಅಧಿಕಾರಕ್ಕೆ ತರುತ್ತೇವೆ. ಯತ್ನಾಳ್, ರಮೇಶ್ ಜಾರಕಿಹೊಳಿ ಹುಚ್ಚು ಹುಚ್ಚಾಗಿ ಮಾತಾಡಿದ್ದಾರೆ. ಅವರಿಬ್ಬರನ್ನ ಮುಲಾಜಿಲ್ಲದೇ ಉಚ್ಛಾಟನೆ ಮಾಡಿ ಅಂತ ಹೈಕಮಾಂಡ್ ಗೆ ಹೇಳ್ತೇವೆ. ಕಾಂಗ್ರೆಸ್ ಒಳ ಕಚ್ಚಾಟ ಮರೆಸಲು ಯತ್ನಾಳ್, ರಮೇಶ್ ವಿಜಯೇಂದ್ರ ವಿರುದ್ಧ ಮಾತಾಡ್ತಿದ್ದಾರೆ. ಅದಕ್ಕೇ ನಾನು ಹೇಳಿದ್ದು, ಅವರು ಕಾಂಗ್ರೆಸ್ ಏಜೆಂಟರು ಅಂತ ಬಹಿರಂಗ ವಾಗಿ ಹೇಳುತ್ತೇನೆ. ಯಾರು ಯಡಿಯೂರಪ್ಪ ಅವರಿಂದ ಅಧಿಕಾರ ಪಡೆದಿದ್ರು ಅವರೆ ಇವತ್ತು ಎತ್ತಕಟ್ಟುತ್ತಿದ್ದಾರೆ. ಯತ್ನಾಳ , ರಮೇಶ್ ಜಾರಕಿಹೊಳಿ ಅವರನ್ನ ಎತ್ತಿ ಕಟ್ಟುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಯತ್ನಾಳ್ ಒಳ್ಳೆಯವರೆ, ಆದ್ರೆ ಪಕ್ಷದ ಕೆಲವರು ಅವರಿಗೆ ಪ್ರಚೋದನೆ ಕೊಡ್ತಿದ್ದಾರೆ. ಹೈಕಮಾಂಡ್ ಗೆ ಎಲ್ಲಾ ವರದಿ ಗೊತ್ತಿದೆ ಸಮಯ ಬಂದಾಗ ಎಲ್ಲವನ್ನು‌ ಬಿಚ್ವಿಡುತ್ತೇವೆ ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಮಗಳ ಸಾವಿನಿಂದ ಮನನೊಂದ ತಾಯಿ ಆತ್ಮಹತ್ಯೆ

ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ…

4 hours ago

ಚಾ.ನಗರ | ಆನ್‌ಲೈನ್‌ ಗೇಮ್‌ ನಿಷೇಧಕ್ಕೆ ರೈತ ಸಂಘ ಆಗ್ರಹ

ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ  ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದು…

4 hours ago

ಹುಣಸೂರು | ಬನ್ನಿಕುಪ್ಪೆಯಲ್ಲಿ ಅಸ್ಪೃಶ್ಯತಾ ನಿರ್ಮೂಲನೆ ಕಾರ್ಯಕ್ರಮ

ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್…

5 hours ago

ʻಗ್ಯಾರಂಟಿʼಯಿಂದ ಕೊಳ್ಳುವ ಶಕ್ತಿ ಹೆಚ್ಚಳ ; ಪುಷ್ಪ ಅಮರನಾಥ್‌

ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ  ಕೊಳ್ಳುವ ಶಕ್ತಿ ಹೆಚ್ಚಿದೆ.…

5 hours ago

ಮಡಿಕೇರಿ | ಅರಣ್ಯ ಇಲಾಖೆಯಿಂದ ಕಾರ್ಮಿಕನ ಬಂಧನ ಖಂಡಿಸಿ ನಾಳೆ ಪ್ರತಿಭಟನೆ

ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ,…

6 hours ago

ಶಾಲಾ-ಕಾಲೇಜು ತಂಬಾಕು ಮುಕ್ತದ ಗುರಿ ; ಜಿಲ್ಲಾಧಿಕಾರಿ ಕುಮಾರ

ಮಂಡ್ಯ: ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯವಾಗಿಸಿ ದೃಢೀಕರಣ ಪತ್ರ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ…

6 hours ago