ರಾಜ್ಯ

ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ : ಸಚಿವ ಚಲವರಾಯ ಸ್ವಾಮಿ

ಕಾರವಾರ : ರಾಜ್ಯದ ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ ಎಂದು‌ ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ಹೇಳಿದರು.

ಅವರು ಮಂಗಳವಾರ ಹಳಿಯಾಳದ ಪುರಭವನದಲ್ಲಿ, ಮುಂಗಾರು ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ ಹಾಗೂ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೃಷಿ ಇಲಾಖೆಯಲ್ಲಿ ಸಮಗ್ರವಾಗಿ ಬದಲಾವಣೆ ತರಲಾಗುತ್ತಿದ್ದು 1000 ಅಧಿಕಾರಿ ಸಿಬ್ಬಂದಿಗಳ ನೇಮಕಾತಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ನೋಟಿಪಿಕೇಷನ್ ಹೊರಡಿಸಲಾಗುವುದು ಹಾಗೂ 700 ಮಂದಿಗೆ ಈಗಾಗಲೇ ಮುಂಬಡ್ತಿ ನೀಡಲಾಗಿದೆ ಎಂದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 24 ಸಾವಿರ ಕೃಷಿ ಹೊಂಡ ನಿರ್ಮಿಸುವ ಗುರಿ‌ ಹೊಂದಲಾಗಿದೆ. ಕಳೆದ 2 ವರ್ಷದಲ್ಲಿ ರೈತರಿಗೆ 344 ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಕಬ್ಬು ಕಟಾವು ಯಂತ್ರಗಳ ಖರೀದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 50 ಲಕ್ಷ ಹಾಗೂ ಸಾಮಾನ್ಯ ವರ್ಗದ ರೈತರಿಗೆ 40 ಲಕ್ಷ ಸಬ್ಸಿಡಿ ನೀಡಲಾಗುತ್ತಿದೆ. ಸ್ಪಿಂಕ್ಲರ್ ಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ಎಲ್ಲಾ ರೈತರು ಪಡೆಯಬೇಕು ಎಂದರು.

ಸಮಗ್ರ ಕೃಷಿ ಮಾಡುವ ಅನೇಕ ರೈತರ ಆರ್ಥಿಕವಾಗಿ ಬಲಿಷ್ಠರಾಗಿದ್ದಾರೆ. ಭೂಮಿಯನ್ನು ನಂಬಿ ಸರ್ಕಾರದ ಸವಲತ್ತು ಪಡೆದುಕೊಂಡು ಎಲ್ಲಾ ರೈತರು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂದರು.

ರಾಜ್ಯ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ‌ ಯೋಜನೆಯನ್ನು ಜನರಿಗೆ ನೀಡಿ ಅವರ ಬದುಕನ್ನು ಹಸನು ಮಾಡಲಾಗಿದೆ. ವರ್ಷಕ್ಕೆ 50 ಸಾವಿರ ಕೋಟಿಯಂತೆ 5 ವರ್ಷಕ್ಕೆ 250 ಸಾವಿರ ಕೋಟಿಗಳನ್ನು ಗ್ಯಾರಂಟಿ ಯೋಜನೆ ಗಳಿಗೆ ಮೀಸಲಿಡಲಾಗಿದೆ. ಇದರ ಜೊತೆಗೆ ರಾಜ್ಯದಲ್ಲಿ ಇತರೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದರು.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಳಿಯಾಳ ಶಾಸಕ ಆರ್. ವಿ. ದೇಶಪಾಂತ್ ಮಾತನಾಡಿ, ರೈತರು ತಮಗೆ ವಿತರಿಸಿರುವ ಕೃಷಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಆರ್ಥಿಕ ಸುಧಾರಣೆಯ ಜೊತೆಗೆ ಕೃಷಿ ಉತ್ಪನ್ನಗಳನ್ನು ಹೆಚ್ಚು ಮಾಡಿಕೊಳ್ಳಬೇಕು. ಭತ್ತ ಜೋಳದ ಬೆಳೆಗಳ ಇಳುವರಿ ಕಡಿಮೆಯಾದಂತೆ ಇಲ್ಲಿನ ರೈತರು ಕಬ್ಬು ಬೆಳೆಯಲು ಪ್ರಾರಂಭಿಸಿದರು. ಇದರಿಂದಾಗಿ‌ ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆಯನ್ನು ತೆರೆಯಲಾಯಿತು. ಸರ್ಕಾರದಿಂದ ನೀಡುವ ಸವಲತ್ತುಗಳನ್ನು ಪಡೆದುಕೊಂಡು ರೈತರು ಸಾಮಾಜಿಕ, ಶೈಕ್ಷಣಿಕ‌ ಮತ್ತು ಆರ್ಥಿಕವಾಗಿ ಅಭಿವೃದ್ಧಿಯಾದರೆ ದೇಶದ ಆರ್ಥಿಕ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಇದೇ ಸಂದರ್ಭದಲ್ಲಿ 2025-26ನೇ ಸಾಲಿನ ಬೆಳೆ ಸಮೀಕ್ಷೆ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಕೃಷಿ ಇಲಾಖೆ ಆಯುಕ್ತ ವೈ ಎಸ ಪಾಟೀಲ್ , ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ.ಟಿ ಪುತ್ರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಹಳಿಯಾಳ‌ ಪುರಸಭೆ ಅಧ್ಯಕ್ಷೆ ಪಾರ್ವತಿ ಅಗಸರ, ಉಪಾಧ್ಯಕ್ಷೆ ಲಕ್ಷ್ಮೀ ವಡ್ಡರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾವoಕರ್ ಮತ್ತಿತರು ಇದ್ದರು.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

7 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

7 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

8 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

8 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

9 hours ago