ಕಾರವಾರ : ರಾಜ್ಯದ ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ಹೇಳಿದರು.
ಅವರು ಮಂಗಳವಾರ ಹಳಿಯಾಳದ ಪುರಭವನದಲ್ಲಿ, ಮುಂಗಾರು ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ ಹಾಗೂ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೃಷಿ ಇಲಾಖೆಯಲ್ಲಿ ಸಮಗ್ರವಾಗಿ ಬದಲಾವಣೆ ತರಲಾಗುತ್ತಿದ್ದು 1000 ಅಧಿಕಾರಿ ಸಿಬ್ಬಂದಿಗಳ ನೇಮಕಾತಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ನೋಟಿಪಿಕೇಷನ್ ಹೊರಡಿಸಲಾಗುವುದು ಹಾಗೂ 700 ಮಂದಿಗೆ ಈಗಾಗಲೇ ಮುಂಬಡ್ತಿ ನೀಡಲಾಗಿದೆ ಎಂದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 24 ಸಾವಿರ ಕೃಷಿ ಹೊಂಡ ನಿರ್ಮಿಸುವ ಗುರಿ ಹೊಂದಲಾಗಿದೆ. ಕಳೆದ 2 ವರ್ಷದಲ್ಲಿ ರೈತರಿಗೆ 344 ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಕಬ್ಬು ಕಟಾವು ಯಂತ್ರಗಳ ಖರೀದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 50 ಲಕ್ಷ ಹಾಗೂ ಸಾಮಾನ್ಯ ವರ್ಗದ ರೈತರಿಗೆ 40 ಲಕ್ಷ ಸಬ್ಸಿಡಿ ನೀಡಲಾಗುತ್ತಿದೆ. ಸ್ಪಿಂಕ್ಲರ್ ಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ಎಲ್ಲಾ ರೈತರು ಪಡೆಯಬೇಕು ಎಂದರು.
ಸಮಗ್ರ ಕೃಷಿ ಮಾಡುವ ಅನೇಕ ರೈತರ ಆರ್ಥಿಕವಾಗಿ ಬಲಿಷ್ಠರಾಗಿದ್ದಾರೆ. ಭೂಮಿಯನ್ನು ನಂಬಿ ಸರ್ಕಾರದ ಸವಲತ್ತು ಪಡೆದುಕೊಂಡು ಎಲ್ಲಾ ರೈತರು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂದರು.
ರಾಜ್ಯ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ ಯೋಜನೆಯನ್ನು ಜನರಿಗೆ ನೀಡಿ ಅವರ ಬದುಕನ್ನು ಹಸನು ಮಾಡಲಾಗಿದೆ. ವರ್ಷಕ್ಕೆ 50 ಸಾವಿರ ಕೋಟಿಯಂತೆ 5 ವರ್ಷಕ್ಕೆ 250 ಸಾವಿರ ಕೋಟಿಗಳನ್ನು ಗ್ಯಾರಂಟಿ ಯೋಜನೆ ಗಳಿಗೆ ಮೀಸಲಿಡಲಾಗಿದೆ. ಇದರ ಜೊತೆಗೆ ರಾಜ್ಯದಲ್ಲಿ ಇತರೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದರು.
ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಳಿಯಾಳ ಶಾಸಕ ಆರ್. ವಿ. ದೇಶಪಾಂತ್ ಮಾತನಾಡಿ, ರೈತರು ತಮಗೆ ವಿತರಿಸಿರುವ ಕೃಷಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಆರ್ಥಿಕ ಸುಧಾರಣೆಯ ಜೊತೆಗೆ ಕೃಷಿ ಉತ್ಪನ್ನಗಳನ್ನು ಹೆಚ್ಚು ಮಾಡಿಕೊಳ್ಳಬೇಕು. ಭತ್ತ ಜೋಳದ ಬೆಳೆಗಳ ಇಳುವರಿ ಕಡಿಮೆಯಾದಂತೆ ಇಲ್ಲಿನ ರೈತರು ಕಬ್ಬು ಬೆಳೆಯಲು ಪ್ರಾರಂಭಿಸಿದರು. ಇದರಿಂದಾಗಿ ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆಯನ್ನು ತೆರೆಯಲಾಯಿತು. ಸರ್ಕಾರದಿಂದ ನೀಡುವ ಸವಲತ್ತುಗಳನ್ನು ಪಡೆದುಕೊಂಡು ರೈತರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿಯಾದರೆ ದೇಶದ ಆರ್ಥಿಕ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ 2025-26ನೇ ಸಾಲಿನ ಬೆಳೆ ಸಮೀಕ್ಷೆ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಕೃಷಿ ಇಲಾಖೆ ಆಯುಕ್ತ ವೈ ಎಸ ಪಾಟೀಲ್ , ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ.ಟಿ ಪುತ್ರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಹಳಿಯಾಳ ಪುರಸಭೆ ಅಧ್ಯಕ್ಷೆ ಪಾರ್ವತಿ ಅಗಸರ, ಉಪಾಧ್ಯಕ್ಷೆ ಲಕ್ಷ್ಮೀ ವಡ್ಡರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾವoಕರ್ ಮತ್ತಿತರು ಇದ್ದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…