ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ನು ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧುಬಂಗಾರಪ್ಪ ತಿಳಿಸಿದರು.
ನಗರದ ಜವಾಹರಲಾಲ್ ನೆಹರು ತಾರಾಲಯದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಐತಿಹಾಸಿಕ ಗಗನಯಾನ ಮಾನವಸಹಿತ ಬಾಹ್ಯಾಕಾಶ ಯೋಜನೆಗೆ ಆಯ್ಕೆಯಾಗಿರುವ ಭಾರತೀಯ ವಾಯುಪಡೆಯ ಪೈಲಟ್, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಉಪಸ್ಥಿತಿಯಲ್ಲಿ ಸಚಿವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟರ್ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. 900 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ನಡೆಸಿದ್ದೇವೆ. ಶುಕ್ಲಾ ಅವರಂತಹ ಸಾಧಕರ ಕನಸುಗಳನ್ನು ನಮ್ಮ ಮಕ್ಕಳು ಮುಂದುವರಿಸಬೇಕಾದರೆ ಅವರಿಗೆ ಬಾಲ್ಯದಿಂದಲೇ ಭದ್ರ ಬುನಾದಿ ಹಾಕಬೇಕು ಎಂದರು.
ಇದನ್ನು ಓದಿ: ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ ನಿಧನ
ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಭೇಟಿಯಾಗಿರುವುದು ಪ್ರಪಂಚದ ತುದಿಯಲ್ಲಿ ನಿಂತ ಅನುಭವ ನೀಡುತ್ತಿದೆ. ಸುಮಾರು 40 ವರ್ಷಗಳ ಹಿಂದೆ ರಾಕೇಶ್ ಶರ್ಮಾ ಅವರು ಬಾಹ್ಯಾಕಾಶಕ್ಕೆ ಹೋದಾಗ ನಮಗೆ ಉಂಟಾದ ರೋಮಾಂಚನವನ್ನು ಶುಕ್ಲಾ ಅವರು ಮತ್ತೆ ನೆನಪಿಸುತ್ತಿದ್ದಾರೆ. ಅಂದು ನಮ್ಮ ದೇಶದ ಜನಸಂಖ್ಯೆ 100 ಕೋಟಿಗಿಂತ ಕಡಿಮೆಯಿತ್ತು, ಈಗ 140 ಕೋಟಿ ಜನರ ಕನಸನ್ನು ಶುಕ್ಲಾ ಅವರು ಹೊತ್ತು ಸಾಗುತ್ತಿದ್ದಾರೆ. ಲಕ್ನೋದಲ್ಲಿ ಕಷ್ಟಪಟ್ಟು ಓದಿ, ಇಂದು ಈ ಸ್ಥಾನಕ್ಕೆ ಏರಿರುವ ಅವರ ಸಾಧನೆ ಮಕ್ಕಳಿಗೆ ಮಾದರಿಯಾಗಬೇಕು. ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಬೇಕು, ಆಕಾಶವೇ ಮಿತಿ ಎಂಬಂತೆ ಸಾಧನೆ ಮಾಡಬೇಕು ಎಂದು ಸಚಿವರು ತಿಳಿಸಿದರು.
ಶುಭಾಂಶು ಶುಕ್ಲಾ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಬಾಹ್ಯಾಕಾಶ, ವಿಜ್ಞಾನ ಮತ್ತು ಪೈಲಟ್ ಜೀವನದ ಕುರಿತು ವಿದ್ಯಾರ್ಥಿಗಳು ಕೇಳಿದ ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿ ಎನ್.ಎಸ್.ಬೋಸರಾಜು, ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳಾ ಎನ್., ಕೆಎಸ್ಟಿಇಪಿಎಸ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಸದಾಶಿವ ಪ್ರಭು ಬಿ, ಜವಾಹರಲಾಲ್ ನೆಹರು ತಾರಾಲಯದ ನಿರ್ದೇಶಕ ಬಿ.ಆರ್.ಗುರುಪ್ರಸಾದ್ ಉಪಸ್ಥಿತರಿದ್ದರು.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…