ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ನು ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧುಬಂಗಾರಪ್ಪ ತಿಳಿಸಿದರು.
ನಗರದ ಜವಾಹರಲಾಲ್ ನೆಹರು ತಾರಾಲಯದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಐತಿಹಾಸಿಕ ಗಗನಯಾನ ಮಾನವಸಹಿತ ಬಾಹ್ಯಾಕಾಶ ಯೋಜನೆಗೆ ಆಯ್ಕೆಯಾಗಿರುವ ಭಾರತೀಯ ವಾಯುಪಡೆಯ ಪೈಲಟ್, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಉಪಸ್ಥಿತಿಯಲ್ಲಿ ಸಚಿವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟರ್ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. 900 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ನಡೆಸಿದ್ದೇವೆ. ಶುಕ್ಲಾ ಅವರಂತಹ ಸಾಧಕರ ಕನಸುಗಳನ್ನು ನಮ್ಮ ಮಕ್ಕಳು ಮುಂದುವರಿಸಬೇಕಾದರೆ ಅವರಿಗೆ ಬಾಲ್ಯದಿಂದಲೇ ಭದ್ರ ಬುನಾದಿ ಹಾಕಬೇಕು ಎಂದರು.
ಇದನ್ನು ಓದಿ: ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ ನಿಧನ
ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಭೇಟಿಯಾಗಿರುವುದು ಪ್ರಪಂಚದ ತುದಿಯಲ್ಲಿ ನಿಂತ ಅನುಭವ ನೀಡುತ್ತಿದೆ. ಸುಮಾರು 40 ವರ್ಷಗಳ ಹಿಂದೆ ರಾಕೇಶ್ ಶರ್ಮಾ ಅವರು ಬಾಹ್ಯಾಕಾಶಕ್ಕೆ ಹೋದಾಗ ನಮಗೆ ಉಂಟಾದ ರೋಮಾಂಚನವನ್ನು ಶುಕ್ಲಾ ಅವರು ಮತ್ತೆ ನೆನಪಿಸುತ್ತಿದ್ದಾರೆ. ಅಂದು ನಮ್ಮ ದೇಶದ ಜನಸಂಖ್ಯೆ 100 ಕೋಟಿಗಿಂತ ಕಡಿಮೆಯಿತ್ತು, ಈಗ 140 ಕೋಟಿ ಜನರ ಕನಸನ್ನು ಶುಕ್ಲಾ ಅವರು ಹೊತ್ತು ಸಾಗುತ್ತಿದ್ದಾರೆ. ಲಕ್ನೋದಲ್ಲಿ ಕಷ್ಟಪಟ್ಟು ಓದಿ, ಇಂದು ಈ ಸ್ಥಾನಕ್ಕೆ ಏರಿರುವ ಅವರ ಸಾಧನೆ ಮಕ್ಕಳಿಗೆ ಮಾದರಿಯಾಗಬೇಕು. ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಬೇಕು, ಆಕಾಶವೇ ಮಿತಿ ಎಂಬಂತೆ ಸಾಧನೆ ಮಾಡಬೇಕು ಎಂದು ಸಚಿವರು ತಿಳಿಸಿದರು.
ಶುಭಾಂಶು ಶುಕ್ಲಾ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಬಾಹ್ಯಾಕಾಶ, ವಿಜ್ಞಾನ ಮತ್ತು ಪೈಲಟ್ ಜೀವನದ ಕುರಿತು ವಿದ್ಯಾರ್ಥಿಗಳು ಕೇಳಿದ ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿ ಎನ್.ಎಸ್.ಬೋಸರಾಜು, ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳಾ ಎನ್., ಕೆಎಸ್ಟಿಇಪಿಎಸ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಸದಾಶಿವ ಪ್ರಭು ಬಿ, ಜವಾಹರಲಾಲ್ ನೆಹರು ತಾರಾಲಯದ ನಿರ್ದೇಶಕ ಬಿ.ಆರ್.ಗುರುಪ್ರಸಾದ್ ಉಪಸ್ಥಿತರಿದ್ದರು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…