ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ 6 ವಾರಗಳ ಜಾಮೀನಿಗೆ ಸಪ್ತ ಷರತ್ತುಗಳು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಐದು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಹೈಕೋರ್ಟ್ ಸಪ್ತ ಷರತ್ತುಗಳನ್ನು ವಿಧಿಸಿ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.‌

ಈ ಹಿಂದೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 57ನೇ ಸಿಸಿಎಚ್‌ ನ್ಯಾಯಾಲಯ ಎ2 ಆರೋಪಿ ದರ್ಶನ್‌ಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿತ್ತು. ಬಳಿಕ, ದರ್ಶನ್‌ ಪರ ವಕೀಲರು ಅನಾರೋಗ್ಯದ ಕಾರಣವನ್ನು ಮುಂದಿಟ್ಟುಕೊಂಡು ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸತತ ನಾಲ್ಕು ದಿನಗಳ ವಿಚಾರಣೆಯನ್ನು ನಡೆಸಿದ ನಂತರ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿ ವಿಶ್ವನಾಥ್‌ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವು ಇಂದು (ಅಕ್ಟೋಬರ್‌.30) 45 ದಿನಗಳ ಜಾಮೀನನ್ನು ಮಂಜೂರು ಮಾಡಿದೆ.

ಹೈಕೋರ್ಟ್‌ ವಿಧಿಸಿರುವ ಸಪ್ತ ಷರತ್ತುಗಳೇನು?
1. ಸೆಷೆನ್ಸ್‌ ನ್ಯಾಯಾಲಯಕ್ಕೆ ಪಾಸ್‌ ಪೋರ್ಟ್‌ ಸೆರೆಂಡರ್‌ ಮಾಡುವುದು ಹಾಗೂ ಚಿತ್ರೀಕರಣದಲ್ಲಿ ಪಾಲ್ಗೊಳ್ಳಬಾರದು.
2. ಒಂದು ವಾರದಲ್ಲಿ ವೈದ್ಯಕೀಯ ದಾಖಲಾತಿ ವರದಿಯನ್ನು ಸಲ್ಲಿಸಬೇಕು.
3. ಎರಡು ಲಕ್ಷ ರೂಪಾಯಿ ಬಾಂಡ್‌
4. ಇಬ್ಬರು ಶ್ಯೂರಿಟಿದಾರರು
5. ಸಾಕ್ಷಿ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷ ಬೆದರಿಕೆ ಹಾಕಬಾರದು
6. ಸಾಕ್ಷಿ ನಾಶಕ್ಕೆ ಪ್ರಯತ್ನ ಮಾಡಬಾರದು.
7. ಜಾಮೀನಿನ ದುರುಪಯೋಗ ಮಾಡಿಕೊಳ್ಳುವಂತಿಲ್ಲ.

ಅರ್ಚನ ಎಸ್‌ ಎಸ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

1 hour ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

1 hour ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

2 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

2 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

3 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

3 hours ago