ರಾಜ್ಯ

ಹುಬ್ಬಳ್ಳಿಯ ಗಲಭೆ ಆರೋಪಿ ಶ್ರೀಕಾಂತ್‌ ಪೂಜಾರಿಗೆ ಷರತ್ತುಬದ್ದ ಜಾಮೀನು!

ಬೆಂಗಳೂರು: ೧೬ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಯೋಧ್ಯೆ ಶ್ರೀ ರಾಮ ಮಂದಿರ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾರಣ ಹುಬ್ಬಳ್ಳಿ ಪೊಲೀಸರು ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದರು. ಈ ಬಂಧನದ ಬಳಿಕ ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು ಶ್ರೀಕಾಂತ್ ಪೂಜಾರಿ ಪರ ವಕೀಲರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹುಬ್ಬಳ್ಳಿಯ 1ನೇ ಹೆಚ್ಚುವರಿ ನ್ಯಾಯಾಲಯವು, ಶ್ರೀಕಾಂತ್‌ ಪೂಜಾರಿಗೆ ಜಾಮೀನು ಮಂಜೂರು ಮಾಡಿದೆ.

ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ!: ಶ್ರೀಕಾಂತ್‌ ಪೂಜಾರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದರೂ ಶ್ರೀಕಾಂತ್‌ಗೆ ಬಿಡುಗಡೆ ಭಾಗ್ಯವಿಲ್ಲ. ಇಂದು ಸಂಜೆ ಜಾಮೀನು ಪ್ರತಿ ನಮ್ಮ ಕೈ ಸೇರಲಿದ್ದು, ನಾಳೆ ಸಂಜೆ ಒಳಗಾಗಿ ಶ್ರೀಕಾಂತ್‌ ಪೂಜಾರಿ ಬಿಡುಗಡೆ ಮಾಡಲಾಗುತ್ತದೆ ಎಂದು ಶ್ರೀಕಾಂತ್‌ ಪರ ವಕೀಲರು ತಿಳಿಸಿದ್ದಾರೆ.

೪೨ ಜನರ ಮೇಲೆ ಎಫ್‌ಐಆರ್‌ ದಾಖಲು: ಶ್ರೀಕಾಂತ್‌ ಪೂಜಾರಿ ಬಂಧನವನ್ನು ವಿರೋಧಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ಹೋರಾಟ ನಡೆಸಿದರು. ಇದೀಗ ಬಿಜೆಪಿ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಸೇರಿದಂತೆ ೪೨ ಜನರ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಶ್ರೀಕಾಂತ್‌ ಪೂಜಾರಿ ಮೇಲೆ ೧೬ ಕೇಸ್‌ ಇತ್ತು ಅದರಲ್ಲಿ ಕೆಲವು ಕುಲಾಸೆ ಆಗಿದೆ. ಅಂತ ವ್ಯಕ್ತಿಗೆ ನೀವು ಇಷ್ಟು ಹೋರಾಟ ಮಾಡುತ್ತಿದ್ದೀರಿ ಎಂದರೆ ಏನು ಅರ್ಥ? ಅವನೊಬ್ಬನೇನಾ ಹಿಂದು? ಬಿಜೆಪಿಗರು ಬೇರೆ ಹಿಂದುಗಳಿಗಾಗಿ ಹೋರಾಟ ಮಾಡುತ್ತಿಲ್ಲ.  ಇದು ಕೇವಲ ರಾಜಕೀಯ ಉದ್ದೇಶದಿಂದ ಹೋರಾಟ ಮಾಡುತ್ತಿದ್ದಾರೆ.
– ಡಾ.ಜಿ.ಪರಮೇಶ್ವರ್‌, ಗೃಹ ಸಚಿವರು

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago