ರಾಜ್ಯ

ಹುಬ್ಬಳ್ಳಿಯ ಗಲಭೆ ಆರೋಪಿ ಶ್ರೀಕಾಂತ್‌ ಪೂಜಾರಿಗೆ ಷರತ್ತುಬದ್ದ ಜಾಮೀನು!

ಬೆಂಗಳೂರು: ೧೬ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಯೋಧ್ಯೆ ಶ್ರೀ ರಾಮ ಮಂದಿರ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾರಣ ಹುಬ್ಬಳ್ಳಿ ಪೊಲೀಸರು ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದರು. ಈ ಬಂಧನದ ಬಳಿಕ ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು ಶ್ರೀಕಾಂತ್ ಪೂಜಾರಿ ಪರ ವಕೀಲರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹುಬ್ಬಳ್ಳಿಯ 1ನೇ ಹೆಚ್ಚುವರಿ ನ್ಯಾಯಾಲಯವು, ಶ್ರೀಕಾಂತ್‌ ಪೂಜಾರಿಗೆ ಜಾಮೀನು ಮಂಜೂರು ಮಾಡಿದೆ.

ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ!: ಶ್ರೀಕಾಂತ್‌ ಪೂಜಾರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದರೂ ಶ್ರೀಕಾಂತ್‌ಗೆ ಬಿಡುಗಡೆ ಭಾಗ್ಯವಿಲ್ಲ. ಇಂದು ಸಂಜೆ ಜಾಮೀನು ಪ್ರತಿ ನಮ್ಮ ಕೈ ಸೇರಲಿದ್ದು, ನಾಳೆ ಸಂಜೆ ಒಳಗಾಗಿ ಶ್ರೀಕಾಂತ್‌ ಪೂಜಾರಿ ಬಿಡುಗಡೆ ಮಾಡಲಾಗುತ್ತದೆ ಎಂದು ಶ್ರೀಕಾಂತ್‌ ಪರ ವಕೀಲರು ತಿಳಿಸಿದ್ದಾರೆ.

೪೨ ಜನರ ಮೇಲೆ ಎಫ್‌ಐಆರ್‌ ದಾಖಲು: ಶ್ರೀಕಾಂತ್‌ ಪೂಜಾರಿ ಬಂಧನವನ್ನು ವಿರೋಧಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ಹೋರಾಟ ನಡೆಸಿದರು. ಇದೀಗ ಬಿಜೆಪಿ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಸೇರಿದಂತೆ ೪೨ ಜನರ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಶ್ರೀಕಾಂತ್‌ ಪೂಜಾರಿ ಮೇಲೆ ೧೬ ಕೇಸ್‌ ಇತ್ತು ಅದರಲ್ಲಿ ಕೆಲವು ಕುಲಾಸೆ ಆಗಿದೆ. ಅಂತ ವ್ಯಕ್ತಿಗೆ ನೀವು ಇಷ್ಟು ಹೋರಾಟ ಮಾಡುತ್ತಿದ್ದೀರಿ ಎಂದರೆ ಏನು ಅರ್ಥ? ಅವನೊಬ್ಬನೇನಾ ಹಿಂದು? ಬಿಜೆಪಿಗರು ಬೇರೆ ಹಿಂದುಗಳಿಗಾಗಿ ಹೋರಾಟ ಮಾಡುತ್ತಿಲ್ಲ.  ಇದು ಕೇವಲ ರಾಜಕೀಯ ಉದ್ದೇಶದಿಂದ ಹೋರಾಟ ಮಾಡುತ್ತಿದ್ದಾರೆ.
– ಡಾ.ಜಿ.ಪರಮೇಶ್ವರ್‌, ಗೃಹ ಸಚಿವರು

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago