ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಲೇಖಕಿ ಕಮಲಾ ಹಂಪನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿಂದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಮಲಾ ಹಂಪಲಾ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ. ಸುದೀರ್ಘ 6 ದಶಕಗಳ ಕಾಲ ಲೇಖನ, ಭಾಷಣ, ಅಧ್ಯಯನ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು, ಅಭಿಮಾನಿ ಬಳಗ ಹಾಗೂ ಸಾಹಿತ್ಯ ಆಸಕ್ತರಿಗೆ ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಕಮಲಾ ಹಂಪನಾ ಅವರಿಗೆ ಸಂತಾಪ ಸೂಚಿಸಿದ್ದು, ಆರು ದಶಕಕ್ಕೂ ಹೆಚ್ಚು ಕಾಲ ಸಾಹಿತ್ಯ ಕೃಷಿಯಲ್ಲಿ ತೊಡಗಿ, ಅಧ್ಯಾಪನ ಮತ್ತು ಸಂಶೋಧನೆಯಲ್ಲಿ ದೊಡ್ಡ ಹೆಸರಾಗಿರುವ ನಾಡೋಜ ಕಮಲಾ ಹಂಪನಾ ಅವರ ನಿಧನದ ವಾರ್ತೆ ಕೇಳಿ ಬಹಳ ನೋವಾಯಿತು ಎಂದು ಶೋಕ ಸಂದೇಶ ತಿಳಿಸಿದ್ದಾರೆ.
ಕನ್ನಡ ಸಾರಸ್ವತ ಲೋಕದಲ್ಲಿ ಮಹಿಳಾ, ಜೀವನವ ಪರ ಸಂವೇದನೆಗಳ ಪ್ರತೀಕವಾಗಿದ್ದ ಅವರು ಅರವತ್ತಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ರಚನೆ ಮಾಡಿದ್ದಾರೆ. ಅವರ ಅಗಲಿಕೆ ಕನ್ನಡಕ್ಕೆ ಬಹುದೊಡ್ಡ ನಷ್ಟ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರು, ಅಭಿಮಾನಿಗಳಿಗೆ ನೀಡಲು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ರಾಜ್ಯ ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ಅವರು ಕಮಲಾ ಹಂಪನಾ ಅವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಕನ್ನಡ ಸಾಹಿತ್ಯ ಲೊಕಕ್ಕೆ ಕಮಲಾ ಹಂಪನಾ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಿದಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…