cm sidda̧ramiah pm (1)
ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಹಿತ ಹಲವಾರು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂತಾಪ ಸಂದೇಶದಲ್ಲಿ, ಡಾ. ಎಸ್.ಎಲ್. ಭೈರಪ್ಪರ ಅಗಲಿಕೆಯಿಂದ ನಾವು ನಮ್ಮ ಆತ್ಮಸಾಕ್ಷಿಯನ್ನು ತಟ್ಟಿದ, ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಮಹಾನ್ ಚಿಂತಕರೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರು ನಿರ್ಭೀತ ಹಾಗೂ ಕಾಲಾತೀತ ಚಿಂತಕರಾಗಿದ್ದು, ತಮ್ಮ ಗಂಭೀರ ಮತ್ತು ಚಿಂತನಶೀಲ ಕೃತಿಗಳ ಮೂಲಕ ಕನ್ನಡ ಸಾಹಿತ್ಯವನ್ನು ಅಪಾರವಾಗಿ ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಸಮಾಜವನ್ನು ಪ್ರತಿಬಿಂಬಿಸಲು, ಪ್ರಶ್ನಿಸಲು ಮತ್ತು ಅದರೊಂದಿಗೆ ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿವೆ ಎಂದು ಹೇಳಿದ್ದಾರೆ.
ಇತಿಹಾಸ ಮತ್ತು ಸಂಸ್ಕೃತಿಯ ಕುರಿತ ಅವರ ಅಪಾರ ಆಸಕ್ತಿ ಮತ್ತು ಬದ್ಧತೆ ಮುಂದಿನ ಅನೇಕ ವರ್ಷಗಳವರೆಗೆ ಜನಮನಗಳನ್ನು ಪ್ರೇರೇಪಿಸುತ್ತಲೇ ಇರುತ್ತದೆ ಎಂದು ಪ್ರಧಾನಮಂತ್ರಿ ಪ್ರಶಂಸಿಸಿದ್ದಾರೆ.
ಇದನ್ನು ಓದಿ : ಪದ್ಮಭೂಷಣ, ನಾಡಿನ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಇನ್ನಿಲ್ಲ
“ಈ ದುಃಖದ ಸಂದರ್ಭದಲ್ಲಿ ನನ್ನ ಸಂತಾಪಗಳು ಅವರ ಕುಟುಂಬ, ಬಂಧುಬಳಗ ಮತ್ತು ಅಭಿಮಾನಿಗಳೊಂದಿಗೆ ಇವೆ” ಎಂದು ಪ್ರಧಾನಿ ಮೋದಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ”ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ಸೂಚಿಸಿದ್ದಾರೆ.
”ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು” ಎಂದು ಕಂಬನಿ ಮಿಡಿದಿದ್ದಾರೆ
ಡಿಸಿಎಂ ಡಿ.ಕೆ.ಶಿವಕುಮಾರ್, “ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್ ಎಲ್ ಬೈರಪ್ಪ ಅವರ ಸಾವು ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಇನ್ನೂ ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೇರಿದಂತ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…