ರಾಜ್ಯ

ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಹಿತ ಗಣ್ಯರ ಸಂತಾಪ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸಹಿತ ಹಲವಾರು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂತಾಪ ಸಂದೇಶದಲ್ಲಿ, ಡಾ. ಎಸ್.ಎಲ್. ಭೈರಪ್ಪರ ಅಗಲಿಕೆಯಿಂದ ನಾವು ನಮ್ಮ ಆತ್ಮಸಾಕ್ಷಿಯನ್ನು ತಟ್ಟಿದ, ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಮಹಾನ್ ಚಿಂತಕರೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರು ನಿರ್ಭೀತ ಹಾಗೂ ಕಾಲಾತೀತ ಚಿಂತಕರಾಗಿದ್ದು, ತಮ್ಮ ಗಂಭೀರ ಮತ್ತು ಚಿಂತನಶೀಲ ಕೃತಿಗಳ ಮೂಲಕ ಕನ್ನಡ ಸಾಹಿತ್ಯವನ್ನು ಅಪಾರವಾಗಿ ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಸಮಾಜವನ್ನು ಪ್ರತಿಬಿಂಬಿಸಲು, ಪ್ರಶ್ನಿಸಲು ಮತ್ತು ಅದರೊಂದಿಗೆ ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿವೆ ಎಂದು ಹೇಳಿದ್ದಾರೆ.

ಇತಿಹಾಸ ಮತ್ತು ಸಂಸ್ಕೃತಿಯ ಕುರಿತ ಅವರ ಅಪಾರ ಆಸಕ್ತಿ ಮತ್ತು ಬದ್ಧತೆ ಮುಂದಿನ ಅನೇಕ ವರ್ಷಗಳವರೆಗೆ ಜನಮನಗಳನ್ನು ಪ್ರೇರೇಪಿಸುತ್ತಲೇ ಇರುತ್ತದೆ ಎಂದು ಪ್ರಧಾನಮಂತ್ರಿ ಪ್ರಶಂಸಿಸಿದ್ದಾರೆ.

ಇದನ್ನು ಓದಿ :  ಪದ್ಮಭೂಷಣ, ನಾಡಿನ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಇನ್ನಿಲ್ಲ

“ಈ ದುಃಖದ ಸಂದರ್ಭದಲ್ಲಿ ನನ್ನ ಸಂತಾಪಗಳು ಅವರ ಕುಟುಂಬ, ಬಂಧುಬಳಗ ಮತ್ತು ಅಭಿಮಾನಿಗಳೊಂದಿಗೆ ಇವೆ” ಎಂದು ಪ್ರಧಾನಿ ಮೋದಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ”ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ಸೂಚಿಸಿದ್ದಾರೆ.

”ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು” ಎಂದು ಕಂಬನಿ ಮಿಡಿದಿದ್ದಾರೆ

ಡಿಸಿಎಂ ಡಿ.ಕೆ.ಶಿವಕುಮಾರ್, “ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್‌ ಎಲ್‌ ಬೈರಪ್ಪ ಅವರ ಸಾವು ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಇನ್ನೂ ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೇರಿದಂತ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

6 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 hours ago