ಹಾಸನ(ಸಕಲೇಶಪುರ): ರಾಜ್ಯದ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27 ರೊಳಗೆ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು.
ಅವರು ಇಂದು ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಶಂಕುಸ್ಥಾಪನೆಯನ್ನು ಚಿಕ್ಕಬಳ್ಳಾಪುರದಲ್ಲಿ ತಾನೇ ನಿರ್ವಹಿಸಿ, ಇಂದು ಮೊದಲನೇ ಹಂತದ ಯೋಜನೆಯನ್ನು ಸಂತೋಷದಿಂದ ಉದ್ಘಾಟಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.ಈ ಯೋಜನೆಯ ಪರಿಷ್ಕೃತ ಅಂದಾಜು 23252 ಕೋಟಿ ರೂ.ಗಳಾಗಿದ್ದು, ಇದುವರೆಗೆ 16152ಕೋಟಿ ರೂ.ಗಳನ್ನು ವೆಚ್ಚ ವಾಗಿದ್ದು, ಇನ್ನುಳಿದ 6-7ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದರು.
ಸಕಲೇಶಪುರ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು,ಯೋಜನೆಗೆ ಇಲ್ಲಿನ ನೀರು ಬಳಸಿಕೊಳ್ಳಲಾಗುತ್ತಿದೆ. ಈ ಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡುವ ಬೇಡಿಕೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನೀರು ಕೊರತೆಯಿರುವ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದಾಗಿದ್ದು, ರಾಜ್ಯದ ಜನರಿಗೆ ಪ್ರಯೋಜನಕಾರಿಯಾಗಿದೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…