ರಾಜ್ಯ

ದಸರಾ ಯಶಸ್ವಿಗೆ ಶ್ರಮಿಸಿದ ಅಧಿಕಾರಿಗಳಿಗೆ ಅಭಿನಂದನೆ: ಸಿಎಂ ಸಿದ್ದರಾಮಯ್ಯ

ಮೈಸೂರು : ನಾನೂ ಸಹ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಗ ಅಧಿಕಾರಿಗಳ ಸಹಕಾರದಿಂದ ಯಶಸ್ವಿ ದಸರಾ ಮಾಡಿದ್ದೇವೆ. ಅದೇ ರೀತಿ ಈ ಬಾರಿಯ ದಸರಾ ಯಶಸ್ವಿಗೆ ಶ್ರಮಿಸಿದ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಆಯೋಜಿಸಿದ್ದ ಭೋಜನ ಕೂಟದಲ್ಲಿ ಅವರು ಮಾತನಾಡಿದರು.

‘ಎಲ್ಲಾ ಸಚಿವರು, ಶಾಸಕರು, ಮಾಜಿ ಶಾಸಕರು, ಎಲ್ಲಾ ಅಧಿಕಾರಿಗಳ ಸಹಕಾರದಿಂದ ದಸರಾ ಯಶಸ್ವಿಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಮಾರ್ಗದರ್ಶನದಂತೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ನಿರ್ವಹಿಸಿರುವುದರಿಂದ ಮೈಸೂರು ದಸರಾ ಯಶಸ್ಸು ಆಗಿದೆ’ ಎಂದರು.

ಅಧಿಕಾರಿಗಳು ಅರ್ಪಣೆ ಮನೋಭಾವನೆಯಿಂದ ಹಾಗೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಹಾಗೂ ಟೀಕೆ ಟಿಪ್ಪಣಿ ಗಳು ಬಂದಿರುವುದಿಲ್ಲ. ಕಾರಣ ದಸರಾ ಅಚ್ಚುಕಟ್ಟಾಗಿ ನಡೆದಿದೆ. ಈ ಸಂಬಂಧ ಅಧಿಕಾರಿಗಳಿಗೆ ಅಭಿನಂದನೆಗಳು ಹೇಳುತ್ತೇನೆ ಎಂದರು.

ಮೈಸೂರು ಪ್ರಾಂತ್ಯದ ಕಲೆ ಸಾಹಿತ್ಯ ಶ್ರೀಮಂತಗೊಳಿಸಬೇಕು. ಅಧಿಕಾರಿಗಳು ಈ ಸಂಬಂಧ ಕೆಲಸ ಮಾಡಬೇಕು. ದಸರಾದಲ್ಲಿ ನಾಡ ಹಬ್ಬವಾಗಿ ಆಚರಿಸಲು ಹೆಚ್ಚು ಜನರು ದಸರಾದಲ್ಲಿ ಭಾಗವಹಿಸಬೇಕು ಹಾಗೂ ಅರ್ಥಪೂರ್ಣವಾಗಿ ದಸರಾ ಮಾಡಬೇಕು. ಜನ ಪರವಾಗಿ ಅಧಿಕಾರಿಗಳು ಇರಬೇಕು. ಜನ ಪರವಾದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಮೈಸೂರು ಅಭಿವೃದ್ಧಿಗಾಗಿ ಯೋಜನೆ ಸಿದ್ಧಪಡಿಸಲಾಗುತ್ತಿದ್ದು ಇದಕ್ಕಾಗಿ ಅಧಿಕಾರಿಗಳು ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ಮುಂದಾಗಬೇಕು. ಸಮಾಜದಲ್ಲಿ ನಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಮುಂದಿನ ಮೈಸೂರು ದಸರಾವನ್ನು ಜನಪರ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಮುಂದಾಗೋಣ ಎಂದರು.

ಬರವಿದೆ, ಜನರಿಗೆ ಕುಡಿಯುವ ನೀರಿನ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕ್ರಮವಹಿಸಬೇಕು. ಜಾನುವಾರುಗಳಿಗೆ ಮೇವು ತೊಂದರೆ ಆಗಬಾರದು. ಹಳ್ಳಿ ಗಳಿಗೆ ಅಧಿಕಾರಿಗಳು ಹೋಗಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮಾತನಾಡಿ, ಯಾವುದೇ ಟೀಕೆ ವ್ಯಕ್ತವಾಗದೇ ಇರುವ ಹಾಗೆ ದಸರಾ ಯಶಸ್ಸಿಗೆ ಅಧಿಕಾರಿಗಳು ಉತ್ತಮವಾಗಿ ಕೆಲಸ ಕಾರ್ಯ ನಿರ್ವಹಿಸುವ ಮೂಲಕ ಶ್ರಮಿಸಿದ್ದಾರೆ. ಸರ್ಕಾರದ ಪರವಾಗಿ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಹೇಳುತ್ತೇನೆ ಎಂದರು.ಇದೇ ರೀತಿ ಮುಖ್ಯಮಂತ್ರಿ ಗಳ ಜಿಲ್ಲೆಯಾಗಿರುವುದರಿಂದ ಅಭಿವೃದ್ಧಿ ಪರವಾಗಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ರಾಜ್ಯ ಸಭಾ ಸದಸ್ಯರಾದ ರೆಹಮಾನ್ ಖಾನ್, ಮೇಯರ್ ಶಿವಕುಮಾರ್, ಶಾಸಕರಾದ ಕೆ. ಹರೀಶ್ ಗೌಡ, ಟಿ.ಎಸ್. ಶ್ರೀವತ್ಸ, ಡಿ.ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಜಿ.ಪಂ. ಸಿಇಓ ಎಂ.ಗಾಯಿತ್ರಿ, ನಗರಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್, ಮುಡಾ ಆಯುಕ್ತ ದಿನೇಶ್ ಕುಮಾರ್, ಡಿಡಿಪಿಐ ಪಾಂಡುರಂಗ, ವಾರ್ತಾ ಇಲಾಖೆ ಉಪನಿರ್ದೇಶಕ ಅಶೋಕ್, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಸವಿತಾ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

3 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

4 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

5 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

5 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

6 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

6 hours ago