ನವದೆಹಲಿ: ಇದೇ ಜೂನ್.13 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಾಂಗ್ರೆಸ್ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಊಹೆಯಂತೆ ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಿದ್ದು, ಅಚ್ಚರಿಯಂಬಂತೆ ಬಿಲ್ಕಿಸ್ ಭಾನು ಅವರಿಗೆ ಮಣೆ ಹಾಕಿದೆ.
ವಿಧಾನ ಸಭೆಯ ಸಂಖ್ಯಾಬಲದ ಆಧಾರದಲ್ಲಿ ಒಟ್ಟು 11 ಸ್ಥಾನಗಳಲ್ಲಿ 7 ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ ಬೀಳಲಿವೆ. ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿಗೆ ಮೂರು ಹಾಗೂ ಜೆಡಿಎಸ್ಗೆ ಒಂದು ಸ್ಥಾನ ಸಿಗಲಿದೆ.
ಇನ್ನು ಅತೀ ಜಾಣ್ಮೆಯಿಂದ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವ ಕಾಂಗ್ರೆಸ್ ಎಲ್ಲಾ ಜಾತಿಯನ್ನು ಪರಿಗಣನೆಗೆ ತೆಗೆದುಕೊಳ್ಳುವ ಮೂಲಕ ತನ್ನ ಅಹಿಂದಾ ತತ್ವವನ್ನು ಎತ್ತಿ ಹಿಡಿದಿದೆ. ಇನ್ನು ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನು ಆಯ್ಕೆ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಯತೀಂದ್ರ ಸಿದ್ದರಾಮಯ್ಯ (ಕುರುಬ), ಗೋವಿಂದರಾಜು (ಒಕ್ಕಲಿಗ), ಬಿಲ್ಕಿಸ್ ಭಾನು (ಮುಸ್ಲಿಂ), ಐವಾನ್ ಡಿಸೋಜಾ (ಕ್ರಿಶ್ಚಿಯನ್), ವಸಂತ ಕುಮಾರ್ (ಎಸ್ಸಿ), ಬೋಸರಾಜ್ (ಕ್ಷತ್ರೀಯ), ಬಸನಗೌಡ ಬಾದರ್ಲಿ (ಲಿಂಗಾಯಿತ), ಜಯದೇವ ಗುತ್ತೇದಾರ್ (ಈಡಿಗ)
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…