ನವದೆಹಲಿ: ಇದೇ ಜೂನ್.13 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಾಂಗ್ರೆಸ್ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಊಹೆಯಂತೆ ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಿದ್ದು, ಅಚ್ಚರಿಯಂಬಂತೆ ಬಿಲ್ಕಿಸ್ ಭಾನು ಅವರಿಗೆ ಮಣೆ ಹಾಕಿದೆ.
ವಿಧಾನ ಸಭೆಯ ಸಂಖ್ಯಾಬಲದ ಆಧಾರದಲ್ಲಿ ಒಟ್ಟು 11 ಸ್ಥಾನಗಳಲ್ಲಿ 7 ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ ಬೀಳಲಿವೆ. ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿಗೆ ಮೂರು ಹಾಗೂ ಜೆಡಿಎಸ್ಗೆ ಒಂದು ಸ್ಥಾನ ಸಿಗಲಿದೆ.
ಇನ್ನು ಅತೀ ಜಾಣ್ಮೆಯಿಂದ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವ ಕಾಂಗ್ರೆಸ್ ಎಲ್ಲಾ ಜಾತಿಯನ್ನು ಪರಿಗಣನೆಗೆ ತೆಗೆದುಕೊಳ್ಳುವ ಮೂಲಕ ತನ್ನ ಅಹಿಂದಾ ತತ್ವವನ್ನು ಎತ್ತಿ ಹಿಡಿದಿದೆ. ಇನ್ನು ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನು ಆಯ್ಕೆ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಯತೀಂದ್ರ ಸಿದ್ದರಾಮಯ್ಯ (ಕುರುಬ), ಗೋವಿಂದರಾಜು (ಒಕ್ಕಲಿಗ), ಬಿಲ್ಕಿಸ್ ಭಾನು (ಮುಸ್ಲಿಂ), ಐವಾನ್ ಡಿಸೋಜಾ (ಕ್ರಿಶ್ಚಿಯನ್), ವಸಂತ ಕುಮಾರ್ (ಎಸ್ಸಿ), ಬೋಸರಾಜ್ (ಕ್ಷತ್ರೀಯ), ಬಸನಗೌಡ ಬಾದರ್ಲಿ (ಲಿಂಗಾಯಿತ), ಜಯದೇವ ಗುತ್ತೇದಾರ್ (ಈಡಿಗ)
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…